ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ರಾತ್ರಿ ನಿಷೇಧಾಜ್ಞೆ ಜಾರಿಯಾಗಲಿದ್ದು, ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.ಜೂನ್ 1ರ ಮಧ್ಯರಾತ್ರಿಯಿಂದ ಜೂನ್ 30ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ. ರಾತ್ರಿ 9 ಗಂಟೆಯಿಂದ ಬೆಳಗಿನಜಾವ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳ ವಾಹನ ಸಂಚಾರ ಹೊರತುಪಡಿಸಿ ಉಳಿದ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಅಲ್ಲದೆ ಸಾರ್ವಜನಿಕರು ಸಹ ರಾತ್ರಿ 9 ಗಂಟೆ ಬಳಿಕ ಮನೆಯಿಂದ ಹೊರ ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿಯರು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅಗತ್ಯ ಸಂದರ್ಭ ಹೊರತುಪಡಿಸಿ ಊಳಿದ ವೇಳೆ ಹೊರಗಡೆ ಓಡಾಡುವಂತಿಲ್ಲ. ನಿಯಮಗಳನ್ನು ಪಾಲಿಸದಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.Sign in to your account
Username or Email Address


Password

 Remember Me


