ಬೆಂಗಳೂರು: ಇದೇನು ಬಂಡಾಯ ಅಲ್ಲ. ಈ ಹಿಂದೆ ಯಡಿಯೂರಪ್ಪನವರು ಕೊಟ್ಟ ಮಾತನ್ನು ನೆನಪಿಸಿದ್ದೇವೆ ಎಂದು ಉಮೇಶ್ ಕತ್ತಿ ಸೋದರ ರಮೇಶ್ ಕತ್ತಿ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.ಲೋಕಸಭಾ ಚುನಾವಣೆ ವೇಳೆ ಟಿಕೆಟ್ ತಪ್ಪಿದಾಗ ನಮ್ಮನ್ನು ಭೇಟಿಯಾಗಿದ್ದ ಯಡಿಯೂರಪ್ಪನವರು ರಾಜ್ಯಸಭೆಯ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಅದಕ್ಕಿಂತ 2014ರ ಚುನಾವಣೆಯಲ್ಲಿ ಮೂರು ಸಾವಿರ ಮತಗಳ ಅಂತರದಿಂದ ಸೋತಿದ್ದೆ. ಆದ್ರೂ 2019ರ ಚುನಾವಣೆಯಲ್ಲಿ ನನಗೆ ಯಾಕೆ ಟಿಕೆಟ್ ನೀಡಲಿಲ್ಲ ಕಾರಣ ಇದುವರೆಗೂ ಗೊತ್ತಿಲ್ಲ. ನಾವೆಲ್ಲ 15 ಶಾಸಕರು ಒಂದೆಡೆ ಸೇರಿದ ವಿಷಯ ಸಿಎಂ ಯಡಿಯೂರಪ್ಪರಿಗೆ ಗೊತ್ತು ಎಂದು ಹೇಳುವ ಮೂಲಕ ಸಭೆ ನಡೆದಿರೋದು ಸತ್ಯ ಎಂದು ಒಪ್ಪಿಕೊಂಡರು. ಇದನ್ನೂ ಓದಿ: ಅಸಮಾಧಾನಿತರಿಗೆ ಜುಲೈನಲ್ಲಿ ಬಂಫರ್ ಗಿಫ್ಟ್ – ಭರವಸೆಗೆ ಓಕೆ ಅಂದ್ರಾ ತ್ರಿಮೂರ್ತಿಗಳು?ಸೋದರ ಉಮೇಶ್ ಕತ್ತಿ ಬಿಜೆಪಿಯಲ್ಲಿರುವ ಹಿರಿಯ ನಾಯಕರಲ್ಲಿ ಒಬ್ಬರು. ಹಾಗಾಗಿ ಅವರಿಗೆ ಸಚಿವ ಸ್ಥಾನ ಸಿಗಲೇಬೇಕು. ನನಗೆ ರಾಜ್ಯಸಭೆಯ ಟಿಕೆಟ್ ಸಿಗಲೇಬೇಕು. ಯಡಿಯೂರಪ್ಪನವರು ನಮ್ಮ ನಾಯಕರು. ನಾವು ಚಿಕ್ಕವರಿದಾಗಿನಿಂದಲೂ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಂದಿದ್ದೇವೆ. ಉಮೇಶ್ ಕತ್ತಿ ಸಚಿವ ಸ್ಥಾನ ಮತ್ತು ನಾನು ರಾಜ್ಯಸಭಾ ಟಿಕೆಟ್ ಕೇಳುವುದು ನಮ್ಮ ಹಕ್ಕು. ಆದ್ರೆ ನಾವು ಮುಖ್ಯಮಂತ್ರಿಗಳನ್ನ ಬ್ಲ್ಯಾಕ್ ಮೇಲ್ ಮಾಡಿಲ್ಲ. ಕೊಟ್ಟ ಮಾತು ಉಳಿಸಿಕೊಳ್ಳಿ ಎಂದು ಹೇಳಿದ್ದೇವೆ ಎಂದ್ರು. ಇದನ್ನೂ ಓದಿ: ನಾನೇನು ಸನ್ಯಾಸಿ ಅಲ್ಲ, ಸಚಿವ ಸ್ಥಾನದ ಆಸೆ ಇದೆ: ನಿರಾಣಿಬುಧವಾರ ಮತ್ತು ಒಂದು ವಾರದ ಹಿಂದೆಯೂ ಸಭೆ ನಡೆದಿದೆ. ಸಭೆಯಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಭಾಗದ ಶಾಸಕರು ಭಾಗಿಯಾಗಿದ್ದರು ಎಂಬ ಮಾಹಿತಿ ನನಗಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಿ ಎಂದು ಹೇಳಿದ್ದೇವೆ. ರಾಜಕಾರಣ ಅನ್ನೋದು ನಿಂತ ನೀರಲ್ಲ ಎಂಬ ವಿಷಯ ಎಲ್ಲರಿಗೂ ಗೊತ್ತು. ಕೊರೊನಾ ಬಂದ್ರೆ ರಾಜಕಾರಣ ಮಾಡಬಾರದೆಂದು ಅಂತ ಇದೆನಾ? ಅಕ್ಕ ಸತ್ತರೆ ಅಮವಾಸ್ಯೆ ನಿಲ್ಲಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡಿದರು.Sign in to your account
Username or Email Address


Password

 Remember Me


