ಬೆಂಗಳೂರು: ರಾಜ್ಯದ ರೈತರಿಗೆ ಖುಷಿ ಸುದ್ದಿ. ಅವಧಿಗೆ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಡಲಿದೆ.ಜೂನ್ 5ರ ಬದಲು ಜೂನ್ 1 ಅಥವಾ 2ಕ್ಕೆ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಪ್ರವೇಶ ಮಾಡಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹಲವೆಡೆ ಸಂಜೆಯಿಂದ ಗಾಳಿ ಸಹಿತ ಮಳೆ ಆಗ್ತಿದೆ. ಹಲವೆಡೆ ಮರಗಳು ಉರುಳಿಬಿದ್ದಿದೆ. ಜೂನ್ 1ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮಂಡ್ಯ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಆಗಿದೆ. ಕೆ.ಆರ್.ಪೇಟೆಯ ಆಲಂಬಾಡಿಯಲ್ಲಿ ಮರಗಳು ಬಿದ್ದು ಮನೆಗಳು ಜಖಂಗೊಂಡಿವೆ. ಅದೃಷ್ಠವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಜೂನ್ 1ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಆಗಲಿದೆ. ಮೇ 31ರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Sign in to your account
Username or Email Address


Password

 Remember Me


