ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.ಆಂಧ್ರ ಪ್ರದೇಶದ ಗುಂಟೂರು ಹಾಗೂ ಪ್ರಕಾಶಂ ಜಿಲ್ಲೆಯಿಂದ ಕಾರ್ಮಿಕರು ವಲಸೆ ಬಂದಿದ್ದರು. ಮುಂಜಾಗ್ರತಾ ಕ್ರಮವಾಗಿ ಕಾರ್ಮಿಕರ ಮಾಹಿತಿ ಪಡೆದು, ಕ್ವಾರಂಟೈನ್ ಮಾಡಲು ಕೊರೊನಾ ವಾರಿಯರ್ಸ್ ಮುಂದಾಗಿದ್ದಾರೆ. ಇಷ್ಟಕ್ಕೆ ನಾಡಂಗ ಗ್ರಾಮದ ಕಲೆ ಜನರು ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.Sign in to your account
Username or Email Address


Password

 Remember Me


