ನೆಲಮಂಗಲ: ಕೊರೊನಾ ಸೋಂಕಿತೆಯ ಸಾವಿನಿಂದ, ಆಕೆಯ ಸಂಪರ್ಕದಲ್ಲಿ ಇದ್ದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿತ್ತು. ಹೀಗಾಗಿ ಅವರ ಜಾನುವಾರುಗಳು ಆಹಾರವಿಲ್ಲದೇ ಪರಾದಡುವಂತೆ ಆಗಿತ್ತು. ಈಗ ಈ ಜಾನುವಾರುಗಳ ನೆರವಿಗೆ ತಾಲೂಕಾಡಳಿತ ಬಂದಿದೆ.ಕೊರೊನಾ ಹಬ್ಬುವ ಭಯದಿಂದ ಯಾರೂ ಕ್ವಾರಂಟೈನ್ ಅದವರ ಮನೆಯ ಬಳಿ ಹೋಗಿಲ್ಲ. ಹೀಗಾಗಿ ಅವರ ದನ-ಕಾರುಗಳು ಹಾಗೂ ಮೇಕೆಗಳು ಆಹಾರವಿಲ್ಲದೇ ಮೂಕ ರೋಧನೆ ಅನುಭವಿಸುತ್ತಿದ್ದವು. ಈ ಬಗ್ಗೆ ಬೆಳಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ವರದಿಗೆ ಈಗ ಸ್ಪಂದನೆ ಸಿಕ್ಕಿದ್ದು, ಸ್ಥಳೀಯ ಅಧಿಕಾರಿಗಳು ಗ್ರಾಮಕ್ಕೆ ಬಂದು ಅವುಗಳಿಗೆ ಮೇವಿನ ವ್ಯವಸ್ಥೆ ಮಾಡಿದ್ದಾರೆ.ಜಾನುವಾರುಗಳ ನರವಿಗೆ ಬಂದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸ್, ತಮ್ಮ ಅಧಿಕಾರಿಗಳನ್ನು ಗ್ರಾಮಕ್ಕೆ ಕಳಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಜೊತೆಗೆ ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ಬೆಂಗಳೂರು ಹಾಲು ಉತ್ಪಾದಕ ಒಕ್ಕೂಟದ ಜೊತೆಗೆ ಮಾತನಾಡಿ ಈ ಹಸುಗಳ ಹಾಲನ್ನು ಖರೀದಿ ಮಾಡುವಂತೆ ಮನವಿಮಾಡಿಕೊಂಡು ಮಾನವೀಯತೆ ಮೆರೆದಿದ್ದಾರೆ.ಕ್ವಾರಂಟೈನ್ ಆದ ಮನೆಯ ಜಾನುವಾರುಗಳನ್ನು ನೋಡುವವರಿಲ್ಲದೆ ಕಂಗೆಟ್ಟ ಮೂಕಪ್ರಾಣಿಗಳ ರೋಧನೆ ಮುಗಿಲುಮುಟ್ಟಿತ್ತು. ಪ್ರತಿದಿನ ಸುಮಾರು 60 ಲೀಟರ್ ಹಾಲು ನೀಡುತ್ತಿದ್ದ ಗೋವುಗಳ ಹಾಲು ವ್ಯರ್ಥವಾಗುತ್ತಿತ್ತು. ಕೊರೊನಾ ಬರುತ್ತೆ ಎಂದು ಗ್ರಾಮಸ್ಥರು ಅವರ ಮನೆಯ ಕಡೆ ಹೋಗುತ್ತಿಲ್ಲ. ಸ್ಥಳೀಯ ಹಾಲಿನ ಡೈರಿಯಲ್ಲಿ ಹಾಲನ್ನು ಖರೀದಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಊರಿನ ಗ್ರಾಮಸ್ಥರು ನೆರವಿಗೆ ಬರುವಂತೆ ತಾಲೂಕಾಡಳಿತಕ್ಕೆ ಮನವಿ ಮಾಡಿಕೊಂಡಿದ್ದರು.Sign in to your account
Username or Email Address


Password

 Remember Me


