ನೆಲಮಂಗಲ: ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಕೆಲ ಗ್ರಾಮಸ್ಥರು ಮತ್ತು ಸಂಬಂಧಿಕರನ್ನು ಸೇರಿ 12 ಜನರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಿಂದ ಅಲ್ಲಿನ ಗ್ರಾಮದ ಜಾನುವಾರುಗಳು ಆಹಾರವಿಲ್ಲದೇ ಮೂಕ ರೋಧನೆ ಅನುಭವಿಸುತ್ತಿವೆ.ಕ್ವಾರಂಟೈನ್ ಆದ ಮನೆಯ ಜಾನುವಾರುಗಳನ್ನು ನೋಡುವವರಿಲ್ಲದೆ ಕಂಗೆಟ್ಟ ಮೂಕಪ್ರಾಣಿಗಳ ರೋಧನೆ ಮುಗಿಲುಮುಟ್ಟಿದೆ. ಪ್ರತಿದಿನ ಸುಮಾರು 60 ಲೀಟರ್ ಹಾಲು ನೀಡುತ್ತಿದ್ದ ಗೋವುಗಳ ಹಾಲು ವ್ಯರ್ಥವಾಗುತ್ತಿದೆ. ಕೊರೊನಾ ಬರುತ್ತೆ ಎಂದು ಗ್ರಾಮಸ್ಥರು ಅವರ ಮನೆಯ ಕಡೆ ಹೋಗುತ್ತಿಲ್ಲ. ಸ್ಥಳೀಯ ಹಾಲಿನ ಡೈರಿಯಲ್ಲಿ ಹಾಲನ್ನು ಖರೀದಿಸುತ್ತಿಲ್ಲ. ಜೊತೆಗೆ ಹಾಲನ್ನು ಪಡೆಯಲು ಸಹ ಹಾಲಿನ ಡೈರಿಯವರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.ಹೀಗಾಗಿ ಕೂಡಲೇ ತಾಲೂಕು ಆಡಳಿತ ಮೂಕ ಪ್ರಾಣಿಗಳ ನೆರವಿಗೆ ಬರುವಂತೆ ಸ್ಥಳೀಯರು ಆಗ್ರಹ ಮಾಡಿದ್ದಾರೆ. ಈ ಗ್ರಾಮದ ಸಮಸ್ಯೆ ಬಗ್ಗೆ ವಿಡಿಯೋ ಮಾಡಿದ ಅದೇ ಗ್ರಾಮದ ಭಾನುಪ್ರಕಾಶ್ ನೆಲಮಂಗಲ ತಾಲೂಕು ಆಡಳಿತಕ್ಕೆ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


