ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದಣ್ಣ ಗೊಂಡಿಕಾರ (35) ನಾಪತ್ತೆಯಾಗಿರುವ ಯುವಕ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಕಾರಣ ಇಬ್ಬರು ಸ್ನೇಹಿತರೊಂದಿಗೆ ಚಂದಣ್ಣ ಗ್ರಾಮದ ಹತ್ತಿರದ ಕೃಷ್ಣಾನದಿಗೆ ಈಜಲು ತೆರಳಿದ್ದ. ಮೂವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಚಂದಣ್ಣ ನದಿಯಿಂದ ಹೊರ ಬರದೆ ನಾಪತ್ತೆಯಾಗಿದ್ದಾನೆ.ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ನದಿಯಲ್ಲಿ ಮೀನಿನ ಬಲೆಗೆ ಸಿಲುಕಿ ಚಂದ್ರಣ್ಣ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ನಾಪತ್ತೆಯಾಗಿರುವ ಚಂದ್ರಣ್ಣನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿ ಈ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


