ಬೆಂಗಳೂರು: ರಂಜಾನ್ ಹಬ್ಬಕ್ಕೆಂದು ಸಚಿವರು ಕೋಳಿ ಮತ್ತು ಆಹಾರ ಕಿಟ್ ವಿತರಣೆ ಮಾಡುತ್ತಿದ್ದು, ಸಾಮಾಜಿಕ ಅಂತರವಿಲ್ಲದೇ ಜನರು ಮುಗಿಬಿದ್ದಿದ್ದಾರೆ.ಕೆ.ಆರ್ ಪುರದ ಬಿಜೆಪಿ ಶಾಸಕ ಮತ್ತು ನಗರಾಭಿವೃದ್ಧಿ ಸಚಿವರ ಬಿ.ಎ. ಬಸವರಾಜ್ ಅವರು ತಮ್ಮ ಕ್ಷೇತ್ರದ ಜನರಿಗೆ ರಂಜಾನ್ ಹಬ್ಬದ ಪ್ರಯುಕ್ತ ಕೋಳಿ ಮತ್ತು ಆಹಾರ ಕಿಟ್ ವಿರತೆಣೆ ಮಾಡುತ್ತಿದ್ದಾರೆ. ಈ ವೇಳೆ ಕೋಳಿ ಪಡೆಯಲು ಮುಗುಬಿದ್ದಿರುವ ಜನ ಕೊರೊನಾ ಭಯವನ್ನು ಮರೆತು ವರ್ತಿಸುತ್ತಿದ್ದಾರೆ.ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್ ಪಾಲಿಕೆ ಸದಸ್ಯ ಜಯಪ್ರಕಾಶ್ (ಜೆಪಿ) ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಹಂಚಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಚಾಲನೆ ನೀಡಿದ್ದಾರೆ. ನಂತರ ಜನರನ್ನು ದನ ಕರುಗಳಂತೆ ಕ್ಯೂನಲ್ಲಿ ಕೂಡಿಹಾಕಿ ಕಿಟ್‍ಗಳ ವಿತರಣೆ ಮಾಡಲಾಗಿದೆ.ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಸಚಿವರ ಕಾರ್ಯಕ್ರಮದಲ್ಲೇ ಸಾಮಾಜಿಕ ಅಂತರವಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದೆ.Sign in to your account
Username or Email Address


Password

 Remember Me


