ರಾಯಚೂರು: ಜಿಲ್ಲೆಯ ಯರಮರಸ್‍ನಲ್ಲಿರುವ ಸೂಪರ್ ಕ್ರಿಟಿಕಲ್ ಥರ್ಮಲ್ ವಿದ್ಯುತ್ ಕೇಂದ್ರ ವೈಟಿಪಿಎಸ್‍ನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವುದಕ್ಕೆ ಭೂಸಂತ್ರಸ್ತರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.ಈ ಹಿಂದಿನ ಸರ್ಕಾರ ಪವರ್ ಮೇಕ್ ಕಂಪನಿಗೆ ಮೆಂಟೇನೆನ್ಸ್ ಮತ್ತು ಆಪರೇಷನ್ ಖಾಸಗೀಕರಣಕ್ಕೆ ಮುಂದಾಗಿತ್ತು. ಭೂಸಂತ್ರಸ್ಥರ ಹೋರಾಟ ಹಿನ್ನೆಲೆ ತಾತ್ಕಾಲಿಕವಾಗಿ ಒಪ್ಪಂದ ರದ್ದಾಗಿತ್ತು. ಈಗ ಪುನಃ ಸರ್ಕಾರ ವಿದ್ಯುತ್ ಕೇಂದ್ರವನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಹೋರಾಟಗಳು ಆರಂಭವಾಗಿದ್ದು, ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಭೂಸಂತ್ರಸ್ಥರು ಎಚ್ಚರಿಕೆ ನೀಡಿದ್ದಾರೆ.ಇದುವರೆಗೆ ವಿದ್ಯುತ್ ಕೇಂದ್ರಕ್ಕೆ 13 ಸಾವಿರದ 250 ಕೋಟಿ ಖರ್ಚು ಮಾಡಿದ್ದಾರೆ. 1600 ಮೆಗಾ ವ್ಯಾಟ್ ಸಾಮಥ್ರ್ಯದ ವಿದ್ಯುತ್ ಕೇಂದ್ರವನ್ನು 2018 ರಲ್ಲೇ ಆರಂಭಿಸಬೇಕಾಗಿತ್ತು ಆದರೆ ಇನ್ನೂ ಆರಂಭಿಸಿಲ್ಲ. ಸರ್ಕಾರ ಸ್ಥಳೀಯರಿಗೆ, ಭೂಸಂತ್ರಸ್ಥರಿಗೆ ಉದ್ಯೋಗ ಕೊಡುತ್ತೇವೆ ಎಂದು ಭರವಸೆ ನೀಡಿದ್ದಕ್ಕೆ ಕಾರ್ಯಾರಂಭಕ್ಕೆ ಎಲ್ಲರೂ ಒಪ್ಪಿಗೆ ಕೊಟ್ಟಿದ್ದರು. ಈಗ ಪವರ್ ಮೇಕ್ ಕಂಪನಿಗೆ ನೀಡಲು ಮುಂದಾಗಿರುವುದಕ್ಕೆ ಬಿಡುವುದಿಲ್ಲ ಎಂದು ಸ್ಥಳೀಯ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.Sign in to your account
Username or Email Address


Password

 Remember Me


