ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ನೇಕಾರಿಕೆ ಕೆಲಸ ಇಲ್ಲದೆ ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದ ದಂಪತಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ.ಊಟಕ್ಕೂ ಇಲ್ಲದೆ ಪರದಾಡುತ್ತಿದ್ದ ಸುಖ್‍ರಾಜ್ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ ಮಾಡಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಚಂದ್ರಶೇಖರ್ ಹಾಗೂ ಅವರ ಸ್ನೇಹಿತರು ಸುಖ್‍ರಾಜ್ ಮನೆಗೆ ಹೋಗಿ ದಿನಸಿ ಕಿಟ್ ಕೊಟ್ಟು ಸಹಾಯ ಮಾಡಿದರು.ದಂಪತಿ ಹುಬ್ಬಳ್ಳಿ ಮೂಲದವರಾಗಿದ್ದು, ಸದ್ಯ ಲಾಕ್‍ಡೌನ್‍ನಿಂದ ನೇಕಾರಿಕೆ ಕೆಲಸವೂ ಇಲ್ಲದಂತಾಗಿದೆ. ಸುಖ್‍ರಾಜ್ ಫೈಂಟಿಂಗ್ ಕೆಲಸ ಮಾಡುವುದಾಗಿ ಹೇಳಿದ್ದು, ನಾಳೆಯಿಂದ ಫೈಂಟಿಂಗ್ ಕೆಲಸ ಸಹ ಕೊಡಿಸುವ ಭರವಸೆ ನೀಡಿದ್ದಾರೆ. ಇದಲ್ಲದೇ ಯುವಕ ಕಾರ್ತಿಕ್ ಎಂಬಾತ ಧನಸಹಾಯ ಸಹ ಮಾಡಿದ್ದಾರೆ. ಪಬ್ಲಿಕ್ ಟಿವಿ ಹಾಗೂ ದಾನಿಗಳಿಗೆ ಸುಖ್‍ರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.Sign in to your account
Username or Email Address


Password

 Remember Me


