ಬಳ್ಳಾರಿ: ತಾಲೂಕಿನ ಅಮರಾಪುರ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ನೆರೆಯ ಆಂಧ್ರ ಪ್ರದೇಶ ಗಡಿ ಭಾಗದ ವಧು-ವರ ಸೇರಿದಂತೆ ಎಂಟು ಮಂದಿಯನ್ನ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.ಜಿಲ್ಲಾಡಳಿತದ ಅನುಮತಿ ಪಡೆಯದೆ ನೆರೆಯ ಆಂಧ್ರ ಪ್ರದೇಶದ ಗಡಿ ಗ್ರಾಮದಿಂದ ವಧು-ವರ ಸೇರಿದಂತೆ ಎಂಟು ಮಂದಿ ತಾಲೂಕಿನ ಅಮರಾಪುರ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹಾಜರಾಗಿದ್ದರು. ಖಚಿತ ಮಾಹಿತಿ ಪಡೆದ ಜಿಲ್ಲಾಡಳಿತ ತಂಡವೊಂದನ್ನು ಗ್ರಾಮಕ್ಕೆ ಕಳುಹಿಸಿ, ಕೂಡಲೇ ಆ ಎಂಟು ಮಂದಿಯನ್ನ ಗುರುತಿಸಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಿದೆ.  ಎಂಟು ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ.ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನು ಪತ್ತೆಹಚ್ಚಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಮದುವೆ ತಡೆಯುವಲ್ಲಿ ಯಶಸ್ವಿಯಾಗಿದ್ದರು. ಬಳ್ಳಾರಿ ತಾಲೂಕಿನ ಕುಂಟನಾಳು ಗ್ರಾಮದಲ್ಲಿ ಮೇ 10-13ರಂದು ಪ್ರತ್ಯೇಕವಾಗಿ 7 ಬಾಲ್ಯವಿವಾಹಗಳನ್ನ ಗುರು-ಹಿರಿಯರು ನಿಶ್ಚಯಿಸಿದ್ದರು. ಈ ಕುರಿತು ಮಾಹಿತಿ ಪಡೆದಿದ್ದ ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ತೆರಳಿ, ಬಾಲ್ಯ ವಿವಾಹಗಳನ್ನ ತಡೆದಿದ್ದರು.Sign in to your account
Username or Email Address


Password

 Remember Me


