ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಬಾಣವಾಡಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದೇಶಿಗರ ಕ್ವಾರಂಟೈನ್ ವಿಚಾರವಾಗಿ, ಮಠದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಬೇಡ ಎಂದು ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದರು. ಇಂದು ಗ್ರಾಮಸ್ಥರ ಜೊತೆ ಜಂಟಿ ಸಭೆ ನಡೆಸಿದ ಅಧಿಕಾರಿಗಳು ಮತ್ತು ಪೊಲೀಸರು ಹಾಗೂ ವಸತಿ ಶಾಲೆ ಒಳಗೊಂಡಿರುವ ಮಠದ ಸಿಬ್ಬಂದಿಗಳು ಸಭೆ ನಡೆಸಿ, ಜನವಸತಿ ಪ್ರದೇಶವಾದ ಬಾಣವಾಡಿಯಲ್ಲಿ ಕ್ವಾರಂಟೈನ್ ಬೇಡ, ಪಕ್ಕದ ಗುಡೇಮಾರನಹಳ್ಳಿಯ ಜನನಿಬಿಡ ನಮ್ಮ ಮಠದ ಸಂಸ್ಥೆಯಾದ ಮಾರುತಿ ಶಾಲೆಯನ್ನು ಬೇಕಾದರೆ ಬಳಸಿಕೊಳ್ಳಿ ಎಂದು ಮಠದ ಮುಖ್ಯಸ್ಥರಾದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದ್ದಾರೆ.ಸಭೆ ಬಳಿಕ ಕಟ್ಟಿಗೆ ಬೇಲಿ ತೆರವು ಮಾಡಿದ ಸ್ಥಳೀಯ ಪೊಲೀಸರು, ಕ್ವಾರಂಟೈನ್ ವಿಚಾರದಲ್ಲಿ ಆತಂಕಕ್ಕೆ ಒಳಗಾಗಿರುವ ಬಾಣವಾಡಿ ಗ್ರಾಮಸ್ಥರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಈ ಹಿಂದೆ ಯಾವುದೇ ಕಾರಣಕ್ಕೂ ನಮ್ಮ ಗ್ರಾಮದಲ್ಲಿ ವಿದೇಶಿಗರ ಕ್ವಾರಂಟೈನ್ ಮಾಡಬೇಡಿ ಎಂದು ಬಾಣವಾಡಿ ಗ್ರಾಮದವರು ಮನವಿ ಮಾಡಿದ್ದರು. ಇಂದು ಆತಂಕಗೊಂಡು ಜನರು ವಸತಿ ಶಾಲೆಯ ಮುಂದೆ ಜಮಾಯಿಸಿದ ನೂರಾರು ಗ್ರಾಮಸ್ಥರು, ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಸಿ, ನಮ್ಮ ಮತ್ತೊಂದು ಶಾಲೆ ಇದೆ ಅಲ್ಲಿ ಅವಕಾಶ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದ ಸಚ್ಚಿದಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ ಸಭೆ ನಿರ್ಧಾರ ಎಷ್ಟರಮಟ್ಟಿಗೆ ಜಾರಿಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.Sign in to your account
Username or Email Address


Password

 Remember Me


