ಬೆಂಗಳೂರು: ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಬೆಂಗಳೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದೆ.ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಬೇರೆ ರಾಜ್ಯದಿಂದ ಬಂದವರ ಕೈಗೆ ಸ್ಟಾಂಪಿಂಗ್ ಹಾಕಿ, ಥರ್ಮಲ್ ಸ್ಕ್ಯಾನಿಂಗ್ ಮಾಡಿ, 14 ದಿನ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಸೂಚಿಸಲಾಗುತ್ತದೆ. ಬೈಕು, ಕಾರು ಯಾವುದೇ ಖಾಸಗಿ ವಾಹನದಲ್ಲೂ ಬಂದರೂ ಸೀಲ್ ಫಿಕ್ಸ್, ಕ್ವಾರಂಟೈನ್ ಕಡ್ಡಾಯ ಎಂದು ಬೆಂಗಳೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.ಷರತ್ತು ಪಾಲಿಸಿ: ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದಾಗಿದೆ. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು.ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ ವಾಹನ, ಬಾಡಿಗೆ ವಾಹನ ಅಥವಾ ಬಸ್ ಇವುಗಳ ಮೂಲಕ ಬರಬಹುದು. ವಾಹನದಲ್ಲಿ ಬರಬೇಕಾದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕುಳಿತುಕೊಳ್ಳಬೇಕು. ಒಂದು ಕಾರಿನಲ್ಲಿ ಗರಿಷ್ಟ 3 ಮಂದಿ, ಎಸ್‍ಯುವಿ ವಾಹನದಲ್ಲಿ 5, ವ್ಯಾನ್ ನಲ್ಲಿ 10 ಮಂದಿ, ಬಸ್ ನಲ್ಲಿ ಗರಿಷ್ಟ 25 ಮಂದಿ ಪ್ರಯಾಣಿಸಬಹುದು. ಯಾವ ಚೆಕ್ ಪೋಸ್ಟ್ ಮೂಲಕ ಅನುಮತಿ ನೀಡಲಾಗಿದೆಯೋ ಆ ಚೆಕ್ ಪೋಸ್ಟ್ ಮೂಲಕ ಮಾತ್ರ ಪ್ರವೇಶ ನೀಡಲಾಗುತ್ತದೆ.ವೆಬ್‍ಸೈಟಿಗ್ ಭೇಟಿ ನೀಡಲು ಕ್ಲಿಕ್ ಮಾಡಿ: www.sevasindhu.karnataka.gov.in/Sign in to your account
Username or Email Address


Password

 Remember Me


