ಬೆಂಗಳೂರು: ಪಾದರಾಯನಪುರ ಪ್ರಕರಣದಿಂದ ಆತಂಕಕ್ಕೆ ಒಳಗಾಗಿದ್ದ ರಾಮನಗರ ಜಿಲ್ಲೆಯ ಜನರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಪಾದರಾಯನಪುರ ಗಲಭೆಯ ಆರೋಪಿಗಳ ನಿಗಾವಹಿಸಿದ್ದ ವಿವಿಧ ಇಲಾಖೆಗಳ ಸಿಬ್ಬಂದಿಗೆ ಕೊರೊನಾ ಟೆಸ್ಟ್ ವರದಿಯು ನೆಗೆಟಿವ್ ಬಂದಿದೆ.ಈ ಕುರಿತು ಟ್ವಿಟ್ ಮಾಡಿರುವ ಅಶ್ವತ್ಥ ನಾರಾಯಣ ಅವರು, ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ ಪಾದರಾಯನಪುರ ಗಲಭೆಯ ಆರೋಪಿಗಳ ನಿಗಾವಹಿಸಿದ್ದ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿಯ ಎರಡನೇ ಬಾರಿಯ ಕೊರೊನಾ ತಪಾಸಣೆ ಫಲಿತಾಂಶಗಳು ಕೂಡ ನೆಗೆಟಿವ್ ಬಂದಿವೆ. ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳುತ್ತಾ, ರಾಮನಗರ ಜಿಲ್ಲೆ ಗ್ರೀನ್ ಝೋನ್‍ನಲ್ಲೇ ಉಳಿದಿದೆ ಎಂದು ಹೇಳಬಯಸುತ್ತೇನೆ ಎಂದು ತಿಳಿಸಿದ್ದಾರೆ.ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ, ಪಾದರಾಯನಪುರ ಗಲಭೆಯ ಆರೋಪಿಗಳ ನಿಗಾವಹಿಸಿದ ವಿವಿಧ ಇಲಾಖೆಗಳ ಸಿಬ್ಬಂದಿಗಳು ಸೇರಿ ಒಟ್ಟು 68 ಮಂದಿಯ ಎರಡನೇ ಬಾರಿಯ ಕೊರೋನಾ ತಪಾಸಣೆ ಫಲಿತಾಂಶಗಳು ಕೂಡಾ ನೆಗೆಟಿವ್ ಬಂದಿವೆ. ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳುತ್ತಾ, ರಾಮನಗರ ಜಿಲ್ಲೆ Green Zone ಅಲ್ಲೇ ಉಳಿದಿದೆ ಎಂದು ಹೇಳಬಯಸುತ್ತೇನೆ.— Dr. Ashwathnarayan C. N. (@drashwathcn) May 6, 2020ಪಾದರಾಯನಪುರದ ಪುಂಡರು ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಗಲಭೆ ಎಬ್ಬಿಸಿದ್ದ 124 ಮಂದಿಯಲ್ಲಿ ಐವರಿಗೆ ಕೊರೊನಾ ಸೋಂಕು ಹಬ್ಬಿದೆ. ಅವರು ಕಾಲಿಟ್ಟಿದ್ದ ರಾಮನಗರ ಜಿಲ್ಲೆಗೂ ಕೊರೊನಾ ಸೋಂಕು ಹಬ್ಬುವ ಭೀತಿ ಎದುರಾಗಿತ್ತು. ಅದೃಷ್ಟವಶಾತ್ ಯಾವುದೇ ಸಿಬ್ಬಂದಿಗೆ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ರಾಮನಗರ ಜಿಲ್ಲೆಯ ಜನರು ನಿಟ್ಟುಸಿರುಬಿಟ್ಟಿದ್ದಾರೆ.ಪಾದರಾಯನಪುರದ ಪುಂಡರಲ್ಲಿ ಐವರಿಗೆ ಕೊರೊನಾ ಹೇಗೆ ಬಂತು ಎನ್ನುವುದು ಈಗ ಆರೋಗ್ಯ ಇಲಾಖೆಗೆ ಸವಾಲಾಗಿದೆ. ಈ ಪುಂಡರು ಕೊರೊನಾ ಸೋಂಕಿತರ ಪ್ರಾಥಮಿಕ ಅಥವಾ ಸೆಕೆಂಡರಿ ಸಂಪರ್ಕದಲ್ಲಿದ್ದ ಬಗ್ಗೆ ಮಾಹಿತಿ ಇಲ್ಲ. ಅವರಿಗೆ ಕೊರೊನಾ ಹಬ್ಬಿದ್ದು ಹೇಗೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ಪತ್ತೆ ಮಾಡುತ್ತಿದೆ.ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ನನ್ನ ಸೆಲ್ಫ್ ಕ್ವಾರಂಟೈನ್ ಅವಧಿ ಇಂದು ಮುಕ್ತಾಯವಾಗಿದೆ. ಮತ್ತೆ ನೆಗೆಟಿವ್ ಫಲಿತಾಂಶ ಬಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟದ ಕಾರ್ಯಗಳಲ್ಲಿ ಭಾಗಿಯಾಗಿದ್ದೇನೆ. ಎಂದಿನಂತೆ ಜನಸೇವೆ ಮಾಡಲು ಉತ್ಸುಕನಾಗಿದ್ದೇನೆ. ಈ ದಿನಗಳಲ್ಲಿ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ನನಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.ಕೊರೊನಾ ಸೋಂಕಿತ ಕ್ಯಾಮೆರಾಮೆನ್‍ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಅಶ್ವತ್ಥ ನಾರಾಯಣ ಅವರು ಕಳೆದ ತಿಂಗಳ 29ರಿಂದ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಿದ್ದರು. ಈಗ ಅವರ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡಿದೆ.ನನ್ನ ಸೆಲ್ಫ್ ಕ್ವಾರಂಟೈನ್ ಅವಧಿ ಇಂದು ಮುಕ್ತಾಯವಾಗಿದೆ. ಮತ್ತೆ ನೆಗೆಟಿವ್ ಫಲಿತಾಂಶ ಬಂದಿದ್ದು, ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದ ಸಚಿವ ಸಂಪುಟದ ಕಾರ್ಯಗಳಲ್ಲಿ ಭಾಗಿಯಾಗಿ ಎಂದಿನಂತೆ ಜನಸೇವೆ ಮಾಡಲು ಉತ್ಸುಕನಾಗಿದ್ದೇನೆ. ಈ ದಿನಗಳಲ್ಲಿ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ನನಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು.— Dr. Ashwathnarayan C. N. (@drashwathcn) May 6, 2020Sign in to your account
Username or Email Address


Password

 Remember Me


