ಚಾಮರಾಜನಗರ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 1.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್-19 ಪರೀಕ್ಷಾ ಪಿಸಿಆರ್ ಪ್ರಯೋಗಾಲಯ ರಾಜ್ಯದಲ್ಲಿಯೇ ಅತ್ಯುತ್ತಮ ಪ್ರಯೋಗಾಲಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಕೋವಿಡ್-19 ಪಿಸಿಆರ್ ಪ್ರಯೋಗಾಲಯಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ. ಐಸಿಎಂಆರ್ ನಿಯಮಾವಳಿಯ ಅನುಗುಣವಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.ಒಂದು ಬಾರಿಗೆ ಸುಮಾರು 96 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ವಿರುವ ಈ ಪಿಸಿಆರ್ ಪ್ರಯೋಗಾಲಯದಲ್ಲಿ ಒಂದು ದಿನಕ್ಕೆ 300 ಮಾದರಿಗಳನ್ನು ಪರೀಕ್ಷಿಸಬಹುದಾಗಿದ್ದು, 6 ರಿಂದ 8 ಗಂಟೆಯ ಒಳಗೆ ಅವುಗಳ ಫಲಿತಾಂಶ ಹೊರಬಲಿದೆ. ಇದು ಸಂಪೂರ್ಣವಾಗಿ ಸ್ವಯಂ ಚಾಲಿತ ಯಂತ್ರವಾಗಿದ್ದು, ಇದಕ್ಕಾಗಿ ಹೆಚ್ಚಿನ ಸಿಬ್ಬಂದಿಯೂ ಬೇಕಿಲ್ಲ ಎಂದು ಮಾಹಿತಿ ನೀಡಿದರು.ಕೊವಿಡ್-19 ಸಮಯದಲ್ಲಿ ಕೊರೊನಾ ವೈರಸ್ ಸಂಬಂಧಿತ ಪರೀಕ್ಷೆಗಳನ್ನು ಮಾಡಲು ಅನುಕೂಲವಾದರೆ, ಕೋವಿಡ್-19 ನಂತರದ ದಿನಗಳಲ್ಲಿ ಅನ್ಯ ಪರೀಕ್ಷೆಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಲೋಕಾರ್ಪಣೆ ಮಾಡಲಾಗಿದೆ ಎಂದ ಅವರು, ಪಿಸಿಆರ್ ಟೆಸ್ಟ್ ಯಾವುದೇ ರೋಗವನ್ನು ಹಾಗೂ ಕಾಯಿಲೆಯನ್ನು ನಿಖರವಾಗಿ ಪತ್ತೆ ಹಚ್ಚುವ ಕಾರ್ಯವನ್ನು ಮಾಡಲಿದೆ ಎಂದರು.Sign in to your account
Username or Email Address


Password

 Remember Me


