ಬೆಂಗಳೂರು: ಲಾಕ್ ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಒಂದು ಕಡೆ ಕೋವಿಡ್ ನಿಯಂತ್ರಣ ಮತ್ತೊಂದು ಕಡೆ ಆರ್ಥಿಕ ಚಟುವಟಿಕೆ ಎರಡನ್ನೂ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಶೇ.11ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಈಗಾಗಲೇ ಶೇ.6 ರಷ್ಟು ಅಬಕಾರಿ ಸುಂಕ ಹೆಚ್ಚಳದ ಬಿಸಿ ಅನುಭವಿಸಿದ್ದ ಮದ್ಯಪ್ರಿಯರಿಗೆ ಈಗ ಮತ್ತೆ ಕೊರೊನಾ ಶಾಕ್ ನೀಡಿದೆ.ರಾಜ್ಯದಲ್ಲಿ ಶೇ.17ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡುವುದಾಗಿ ತಿಳಿಸಿದ ಸಿಎಂ, ಇನ್ನೆರಡು ದಿನಗಳಲ್ಲಿ ಹೊಸ ಆದೇಶ ಜಾರಿಗೊಳಿಸುವುದಾಗಿ ಮಾಹಿತಿ ನೀಡಿದರು. ಕುಡಿಯುವವರು ಇರುವಾಗ ಏನು ಸಿದ್ಧತೆ ಮಾಡಬೇಕು ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಎಸ್‍ವೈ ತಿರುಗೇಟು ನೀಡಿದರು. ಇದನ್ನೂ ಓದಿ: ರಾಜ್ಯಕ್ಕೆ ಮದ್ಯ ಎಷ್ಟು ಮುಖ್ಯ? ಕರ್ನಾಟಕದ ಆದಾಯದಲ್ಲಿ ಎಣ್ಣೆ ಪಾಲು ಎಷ್ಟಿದೆ? ಈಗ ಎಷ್ಟು ಏರಿಕೆಯಾಗಿದೆ?ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರೋರಿಗಾಗಿ ಸಿಎಂ ಯಡಿಯೂರಪ್ಪ ಸರ್ಕಾರ 1,610 ಕೋಟಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಲಾಕ್‍ಡೌನ್ ನಿಂದಾಗಿ ಸಭೆ-ಸಮಾರಂಭ, ಮದುವೆ ನಡೆಸದಿರುವುದರಿಂದ ಹೂವು ಬೆಳೆದವರು ನಷ್ಟ ಅನುಭವಿಸಿದ್ದಾರೆ. 11,687 ಹೆಕ್ಟೆರ್ ವಿಸ್ತೀರ್ಣದಲ್ಲಿ ಬೆಳೆದ ಹೂ ಮಾರಾಟ ಆಗದೆ ರೈತರಿಗೆ ನಷ್ಟವಾಗಿದೆ. ಹಾಗಾಗಿ ಹೂ ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ನೀಡಲಾಗುತ್ತದೆ ಎಂದರು.ಇತ್ತ ಒಂದು ತಿಂಗಳಿನಿಂದ ಕೆಲಸವಿಲ್ಲದೆ ಕುಳಿತಿರುವ ಕ್ಷೌರಿಕ, ಆಟೋ, ಟ್ಯಾಕ್ಸಿ ಚಾಲಕರು ಹಾಗೂ ಅಗಸರಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಅಂದಾಜು 60,000 ಅಗಸರು, 2,30,000 ಕ್ಷೌರಿಕರು, ಆಟೋ ಹಾಗೂ ಟ್ಯಾಕ್ಸಿ ಚಾಲಕರು ಒಟ್ಟು 7,75000 ಜನ ರಾಜ್ಯದಲ್ಲಿ ಇದ್ದಾರೆ.  ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ






 Advertisement 




Sign in to your account
Username or Email Address


Password

 Remember Me


