ಚಿತ್ರದುರ್ಗ: ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿರು ಚಿತ್ರದುರ್ಗಕ್ಕೆ ತಬ್ಲಿಘಿಗಳು ವಾಪಸ್ ಆಗಿದ್ದಾರೆ.ಭಾರತದಲ್ಲಿ ಕೊರೊನಾ ಶುರುವಾದಾಗ ವಿದೇಶಕ್ಕೆ ತೆರಳಿದ್ದ ಚಿತ್ರದುರ್ಗ ಮೂಲದ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದದಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದರು. ಮಹಿಳೆ ಗುಣಮುಖರಾಗಿ ಮನೆ ಸೇರಿದ ಬಳಿಕ ನಿಟ್ಟುಸಿರು ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಯಾರಿಗೂ ಸೋಂಕು ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿದೆ. ಆದರೆ ಮಂಗಳವಾರ ಗುಜರಾತ್‍ನಿಂದ ಬಂದಿರುವ 33ಜನ ತಬ್ಲಿಘಿಗಳು ಬಂದಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಡಿಎಚ್‍ಓ ಡಾ.ಪಾಲಾಕ್ಷ ಅವರು, ಅದೃಷ್ಟವಶಾತ್ ಅವರೆಲ್ಲರೂ ಸಹ ಈಗಾಗಲೇ ಗುಜರಾತ್‍ನಲ್ಲಿ ತಪಾಸಣೆಗೊಳಪಟ್ಟಿದ್ದು, 30 ದಿನಗಳ ಕ್ವಾರಂಟೈನ್ ಸಹ ಮುಗಿಸಿದ್ದಾರೆ. ಆದರೂ ಅವರನ್ನು ಮುಂಜಾಗ್ರತಾಕ್ರಮವಾಗಿ ಚಿತ್ರದುರ್ಗದ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಗೆಯೇ ಮತ್ತೊಮ್ಮೆ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸುವುದರ ಜೊತೆಗೆ ಅವರ ಮೇಲೆ ಒಂದು ವಾರಗಳ ಕಾಲ ನಿಗಾ ವಹಿಸಲಾಗುವುದು ಎಂದು ತಿಳಿಸಿದ್ದಾರೆ.ಚಿತ್ರದುರ್ಗಕ್ಕೆ ವಾಪಸ್ ಆಗಿರುವ ತಬ್ಲಿಘಿಗಳೆಲ್ಲರೂ ಚಿತ್ರದುರ್ಗ, ತುಮಕೂರು ಮೂಲದವರಾಗಿದ್ದು, ಅವರಲ್ಲಿ ಚಿತ್ರದುರ್ಗದ 15 ಜನ ಹಾಗೂ ತುಮಕೂರಿನ 18 ಜನ ತಬ್ಲಿಗಿಗಳು ಒಂದೇ ಬಸ್‍ನಲ್ಲಿ ವಾಪಸ್ ಆಗಿದ್ದಾರೆ. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಮಾರ್ಚ್ 8ರಂದು ನಡೆದ ತಬ್ಲಿಘಿ ಸಭೆಗೆ ತೆರಳಿದ್ದರು. ಲಾಕ್‍ಡೌನ್ ಸಡಿಲಿಕೆಯಿಂದಾಗಿ ಸೋಮವಾರ ಗುಜರಾತಿನಿಂದ ಪ್ರಯಾಣ ಬೆಳೆಸಿ ಇಂದು ಅವರ ಸ್ವಗ್ರಾಮಗಳಿಗೆ ತೆರಳಲು ಆಗಮಿಸಿದ್ದಾರೆ. ಆದರೆ ಎಚ್ಚೆತ್ತ ಜಿಲ್ಲೆಯ ಪೊಲೀಸರು ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಚೆಕ್ ಪೋಸ್ಟ್ ಬಳಿ ಅವರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಕೋಟೆನಾಡಿನ ಮಂದಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯಾಧಿಕಾರಿ ಮನವಿ ಮಾಡಿದ್ದಾರೆ.ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡ ಚಿತ್ರದುರ್ಗದ 15 ಜನರನ್ನು ಮಾತ್ರ ಇಲ್ಲಿ ಕ್ವಾರಂಟೈನ್ ಮಾಡಿದ್ದು, 18 ಜನರನ್ನು ತುಮಕೂರಿಗೆ ಕಳಿಸಿದ್ದಾರೆ. ಆದರೆ ಈವರೆಗೆ ನಿರಾತಂಕವಾಗಿ ಯಾವುದೇ ಭಯವಿಲ್ಲದೇ ನಿರ್ಭಯವಾಗಿ ಓಡಾಡುತ್ತಿದ್ದ ಚಿತ್ರದುರ್ಗದ ಜನರು ತಬ್ಲಿಘಿಗಳ ಆಗಮನದಿಂದ ಮತ್ತೆ ಚಿಂತಾಕ್ರಾಂತರಾಗಿದ್ದಾರೆ.Sign in to your account
Username or Email Address


Password

 Remember Me


