ಮಡಿಕೇರಿ: ಕೊರೊನಾ ವಿರುದ್ಧದ ಸಮರ ಸೈನಿಕರೆಂದು ಹೆಸರಾಗಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಾಪೋಕ್ಲುವಿನಲ್ಲಿ ನಡೆದಿದೆ.ಆಶಾ ಕಾರ್ಯಕರ್ತೆ ಲತಾ ಮತ್ತು ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಅವರು, ಮಾಹಿತಿ ಪಡೆಯಲೆಂದು ನಾಪೋಕ್ಲು ಬಳಿಯ ನಿವೃತ್ತ ಯೋಧ ಬೋಪಯ್ಯ ಮನೆಗೆ ತೆರಳಿದ ಸಂದರ್ಭ ಘಟನೆ ನಡೆದಿದ್ದು, ಆಶಾ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆಗೆ ಮುಂದಾಗಿದ್ದಾರೆ. ಈ ಸಂಬಂಧ ಆಶಾ ಕಾರ್ಯಕರ್ತರು ಗ್ರಾಮದ ಬೋಪಯ್ಯ ಎಂಬುವವರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕೊರೊನಾ ಸಂಬಂಧಿತ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಅವಿರತ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ನಾಪೋಕ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


