ಬೆಂಗಳೂರು: ಕಳೆದ 24 ಗಂಟೆಯಲ್ಲಿ 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ.ಇಂದು ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರಿನಲ್ಲಿ 1, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 8 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 511ಕ್ಕೆ ಏರಿದೆ. ಇದುವರೆಗೆ ಒಟ್ಟು 188 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/JAR3SpBdoJ— B Sriramulu (@sriramulubjp) April 27, 2020ಸೋಂಕಿತರ ವಿವರ:
ರೋಗಿ-504: ಬೆಂಗಳೂರಿನ ಪಾದರಾಯಪುರದ 13 ವರ್ಷದ ಬಾಲಕ, ಅನಾರೋಗ್ಯದಿಂದ ಬಳಲುತ್ತಿದ್ದ.
ರೋಗಿ-505: ಮಂಡ್ಯ ಜಿಲ್ಲೆಯ ನಾಗಮಂಗಲದ 50 ವರ್ಷದ ಪುರುಷ, ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಹಿನ್ನೆಲೆ
ರೋಗಿ-506: ದಕ್ಷಿಣ ಕನ್ನಡದ 45 ವರ್ಷದ ಪುರುಷ, ರೋಗಿ-432 ಜೊತೆ ಸಂಪರ್ಕ.
ರೋಗಿ-507: ದಕ್ಷಿಣ ಕನ್ನಡದ 80 ವರ್ಷದ ವೃದ್ಧೆ, ರೋಗಿ-432 ಜೊತೆ ಸಂಪರ್ಕ.
ರೋಗಿ-508: ಬಾಗಲಕೋಟೆ ಜಮಖಂಡಿಯ 32 ವರ್ಷದ ಮಹಿಳೆ, ರೋಗಿ-456 ಜೊತೆ ಸಂಪರ್ಕ.
ರೋಗಿ-509: ಬಾಗಲಕೋಟೆ ಜಮಖಂಡಿಯ 21 ವರ್ಷದ ಯುವತಿ, ರೋಗಿ-456 ಜೊತೆ ಸಂಪರ್ಕ.
ರೋಗಿ-510: ವಿಜಯಪುರದ 45 ವರ್ಷದ ಪುರುಷ, ರೋಗಿ-221 ಜೊತೆ ಸಂಪರ್ಕ.
ರೋಗಿ-511: ವಿಜಯಪುರದ 27 ವರ್ಷದ ಯುವಕ, ಸೋಂಕು ಹೇಗೆ ತಗುಲಿತು ಎಂಬ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.ಬೆಂಗಳೂರು ನಗರದ 50 ವರ್ಷದ ಪುರುಷ(ರೋಗಿ-466) ಇಂದು ಸಾವನ್ನಪ್ಪಿದ್ದಾರೆ. ಈ ರೋಗಿ ಏಪ್ರಿಲ್ 24ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ನ್ಯೂಮೋನಿಯಾ, ಅಧಿಕ ರಕ್ತದೊತ್ತಡ, ಎಚ್‍ಸಿವಿ ಪಾಸಿಟಿವ್ ಹಾಗೂ ಕಿಡ್ನಿ ಸಮಸ್ಯೆ ಇತ್ತು. ಇವರು ಇಂದು ಆಸ್ಪತ್ರೆಯ ತುರ್ತು ನಿರ್ಗಮನದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


