ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನದಲ್ಲಿ 9 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇತ್ತ ಕಲಬರುಗಿಯಲ್ಲಿ 4 ತಿಂಗಳ ಮಗು ಸೇರಿದಂತೆ ಐವರಿಗೆ ಕೊರೊನಾ ಸೋಂಕು ತಗುಲಿದೆ. ಉಳಿದಂತೆ ಬೆಂಗಳೂರಿನ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಕೊರೊನಾ ಸೋಂಕಿತರ ವಿವರ:
ರೋಗಿ 419 : 54 ವರ್ಷದ ಪುರುಷನಾಗಿದ್ದು, ಬೆಂಗಳೂರಿನ ನಿವಾಸಿ. ತೀವ್ರ ಉಸಿರಾಟದ ತೊಂದರೆ. ಸದ್ಯ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 420 : 28 ವರ್ಷದ ಮಹಿಳೆಯಾಗಿದ್ದು, ಬೆಂಗಳೂರಿನ ನಿವಾಸಿ. ರೋಗಿ ನಂಬರ್ 208ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 421 : 46 ವರ್ಷದ ಮಹಿಳೆಯಾಗಿದ್ದು, ಕಲಬುರಗಿಯ ನಿವಾಸಿ. ರೋಗಿ ನಂಬರ್ 222ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 422 : 57 ವರ್ಷದ ಪುರುಷನಾಗಿದ್ದು, ಕಲಬುರಗಿಯ ನಿವಾಸಿ. ತೀವ್ರ ಉಸಿರಾಟದ ತೊಂದರೆಯೊಂದ ದಾಖಲು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.ರೋಗಿ 423 : 35 ವರ್ಷದ ಮಹಿಳೆಯಾಗಿದ್ದು, ಕಲಬುರಗಿಯ ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 424 : ಕಲಬುರಗಿಯ 4 ತಿಂಗಳ ಹೆಣ್ಣು ಮಗು. ಕಲಬುರಗಿಯ ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿತ್ತು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 425 : 26 ವರ್ಷದ ಮಹಿಳೆಯಾಗಿದ್ದು, ಕಲಬುರಗಿಯ ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿದ್ದರು. ರೋಗಿ ನಂಬರ್ 424 ಹೆಣ್ಣು ಮಗುವಿನ ತಾಯಿ. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 426 : ಮೈಸೂರು ಜಿಲ್ಲೆ ನಂಜನಗೂಡಿನ 56 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ರೋಗಿ- 383 (ಮಾವ) ಸಂಪರ್ಕ ಹೊಂದಿದ್ದರು. ಅವರಿಗೆ ಮೈಸೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 427 : ಮೈಸೂರು ಜಿಲ್ಲೆ ನಂಜನಗೂಡಿನ 32 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ರೋಗಿ-52 ಜೊತೆಗೆ ದ್ವಿತೀಯ ಸಂಪರ್ಕ ಹೊಂದಿದ್ದರು. ಅವರನ್ನು ಮೈಸೂರಿ ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಿದ್ದ ರೋಗಿಗಳ ಪಟ್ಟಿಯಲ್ಲಿ ಏಳು ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ ಸಂಜೆ ವೇಳೆ ನಂಜನಗೂಡಿನ ಇಬ್ಬರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ನಿನ್ನೆಗಿಂತ ಇಂದು ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ.ಕೋವಿಡ್19: 22 ಏಪ್ರಿಲ್ 2020 ರ ಸಂಜೆಯವರೆಗಿನ ಮಾಹಿತಿಒಟ್ಟು ಪ್ರಕರಣಗಳು: 427ಮೃತಪಟ್ಟವರು: 17ಗುಣಮುಖರಾದವರು: 131ಹೊಸ ಪ್ರಕರಣಗಳು: 09ಇತರೆ ಮಾಹಿತಿ: ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, 1/2 pic.twitter.com/bXwMLQ2gAq— CM of Karnataka (@CMofKarnataka) April 22, 2020ಮಂಗಳವಾರ 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಇಂದು ಸೋಂಕಿತರ ಸಂಖ್ಯೆ 418ರಿಂದ 427ಕ್ಕೆ ಏರಿಕೆಯಾಗಿದೆ. ಮಂಗಳವಾರ ಕಲಬುರಗಿ, ವಿಜಯಪುರದಲ್ಲಿ ತಲಾ ಮೂವರಿಗೆ, ಮೈಸೂರಿನ ನಂಜನಗೂಡಿನಲ್ಲಿ ಇಬ್ಬರಿಗೆ, ಬೆಳಗಾವಿ ಮತ್ತು ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಒಬ್ಬರಿಗೆ ಸೋಂಕು ತಗುಲಿತ್ತು. ಮಂಗಳವಾರದಿಂದಲೇ ಬಂಟ್ವಾಳಕ್ಕೆ ಸಂಪರ್ಕಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ಪಟ್ಟಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.Sign in to your account
Username or Email Address


Password

 Remember Me


