ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ.ನಾಳೆಯಿಂದ ಕಟೈಂನ್‍ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್‍ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.ಏನಿರುತ್ತೆ?:
ಸೇಫ್ ಝೋನ್‍ನಲ್ಲಿ ಕಟ್ಟಡ ನಿರ್ಮಾಣ, ರಸ್ತೆ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಸಿಮೆಂಟ್, ಜೆಲ್ಲಿ, ಗೂಡ್ಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ವೈಯಕ್ತಿಕ ಪಾಸ್ ಇದ್ದರೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಸ್ವ ಉದ್ಯೋಗ ಮಾಡುವ ವ್ಯಕ್ತಿಗಳಿಗೆ, ಎಲೆಕ್ಟ್ರೀಷಿಯನ್ಸ್, ಐಟಿ ರಿಪೇರಿ, ಪ್ಲಂಬರ್, ಮೋಟಾರ್ ಮೆಕಾನಿಕ್ಸ್, ಕಾರ್ಪೆಂಟರ್ಸ್ ಗಳಿಗೆ ಕೆಲಸ ನಿರ್ವಹಿಸಲು ಅವಕಾಶ ನೀಡಿಲಾಗಿದೆ.ಗೂಡ್ಸ್ ರೈಲುಗಳ ಮೂಲಕ ಅಗತ್ಯ ವಸ್ತು ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ತುರ್ತು ಅಗತ್ಯ ಸೇವೆಗಳ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಸೇವೆಗಳಿಗಾಗಿ ವಾಹನ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಕಾರಿನಲ್ಲಿ ಕೇವಲ ಇಬ್ಬರು ಮಾತ್ರ ಪ್ರಯಾಣಿಸಬೇಕು. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ. ಅಗತ್ಯ ಸರ್ಕಾರಿ ಇಲಾಖೆಗಳನ್ನು ತೆರೆಯಬೇಕು. ಆದರೆ ಶೇ.33ರಷ್ಟು ಸಿಬ್ಬಂದಿ ಮಾತ್ರ ಕೆಲಸ ನಿರ್ವಹಿಸಬೇಕು. ಅಗತ್ಯವಸ್ತುಗಳನ್ನು ಆನ್‍ಲೈನ್‍ನಲ್ಲಿ ಖರೀದಿ ಮಾಡಬಹುದು.ಏನಿಲ್ಲ?:
ಮೆಟ್ರೋ, ರೈಲು, ಬೈಕ್ ಸಂಚಾರ ಇರುವುದಿಲ್ಲ. ಮೇ 3ರವರೆಗೆ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸಂಚಾರ ಇರುವುದಿಲ್ಲ. ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಮದ್ಯ ಮಾರಾಟ ಮೇ 3ರವರೆಗೂ ಇರುವುದಿಲ್ಲ. ಹೋಟೆಲ್, ರೆಸ್ಟೋರೆಂಟ್‍ಗಳನ್ನು ತೆರೆಯುವಂತಿಲ್ಲ. ಯಾವುದೇ ಸಭೆ, ಕಾರ್ಯಕ್ರಮ ನಡೆಸುವಂತಿಲ್ಲ. ಅಂತರ ಜಿಲ್ಲೆ ಸಂಚಾರ ಇರುವುದಿಲ್ಲ.ಈ ಮೊದಲು ಐಟಿ-ಬಿಟಿ ಕಂಪನಿ ತೆರೆಯಲು ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೆ ಹೊಸ ಪ್ರಕಟಣೆ ಹೊರಡಿಸಿರುವ ಸರ್ಕಾರವು ಕನಿಷ್ಠ ಸಿಬ್ಬಂದಿ ಆಧಾರದ ಮೇಲೆ  ಕಂಪನಿ ತೆರೆಯಬಹುದು ಎಂದು ತಿಳಿಸಿದೆ.Sign in to your account
Username or Email Address


Password

 Remember Me


