ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಸಾರಿಗೆ ಸಂಸ್ಥೆಯ ಕಂಡಕ್ಟರ್ ಬಸವರಾಜ ಅವರು ಸ್ವಯಂ ಪ್ರೇರಣೆಯಿಂದ ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿರುವುದು ಸಮಾಜಕ್ಕೆ ಮಾದರಿಯಾದ ಕಾರ್ಯವಾಗಿದೆ. ಜಿಲ್ಲಾಡಳಿತ ಈ ಕಾರ್ಯವನ್ನು ಪ್ರಶಂಸಿಸುತ್ತದೆ ಎಂದರು.ಈ ವೇಳೆ ವಾ.ಕ.ರ.ಸಾ.ಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹನುಮಂತ ಬೋಜೇದಾರ್, ಬಸವರಾಜ ಅವಾರಿ, ಎಂ.ಎಸ್.ರೋಣದ, ವೆಂಕಟೇಶ್ ಹರ್ತಿ, ಡಾ.ಪಿ.ವಿ.ಸವದಿ ಇದ್ದರು.Sign in to your account
Username or Email Address


Password

 Remember Me


