ಹಾಸನ: ನಾನು ಮಾಸ್ಕ್ ಹಾಕದೆ ಹೊರಗೆ ಹೋಗುತ್ತೇನೆ. ಬೇಕಾದರೆ ನನ್ನನ್ನು ಬಂಧಿಸಲಿ. ಜೈಲಿನಲ್ಲಿ ಊಟನಾದರೂ ಸಿಗುತ್ತೆ ಎಂದು ಪ್ರಸ್ತುತ ಸ್ಥಿತಿಯ ಬಗ್ಗೆ ಮಾಜಿ ಸಚಿವ ರೇವಣ್ಣ ವ್ಯಂಗ್ಯವಾಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ರೇವಣ್ಣ ಆಕ್ರೋಶ ಹೊರಹಾಕಿದ್ರು.ದೇಶದ ಪ್ರಧಾನಿ ಮತ್ತು ಸಿಎಂ ಹೇಳಿದ ಹಾಗೆ ಜನರು ಪಾಲಿಸಿದ್ದಾರೆ. ಅವರು ರಾಷ್ಟ್ರದ ದೊರೆ. ರಾಷ್ಟ್ರದ ದೊರೆ ಹೇಳಿದ ಹಾಗೆ ಕೇಳಿದ್ದೇವೆ. ದೀಪ ಹಚ್ಚಿ ಅಂದ್ರು ಹಚ್ಚಿದೆವು. ಯೋಗ ಮಾಡಿ, ಕ್ಲಾಪ್ ಮಾಡಿ ಅಂದ್ರು ಮಾಡಿದ್ದೀವಿ. ಆದರೆ ಈಗ ನಮ್ಮ ರಾಷ್ಟ್ರದ ದೊರೆ ಹಸಿದ ಹೊಟ್ಟೆಗೆ ಅನ್ನ ಕೊಡಲಿ ಎಂದು ಆಗ್ರಹಿಸಿದರು.ರಾಜ್ಯದ ಜನರು ಸಿಎಂ ಫಂಡ್ ಗೆ ನೀಡಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ. ಹಣ ಇಲ್ಲ ಎಂದರೆ ಸಿಎಂಗೆ ಹಣ ಎಲ್ಲಿಂದ ಬರುತ್ತೆ ಅಂತ ನಾವು ತೋರಿಸುತ್ತೇವೆ. ಪಕ್ಷಾತೀತವಾಗಿ ಜನರ ಸಮಸ್ಯೆ ಬಗ್ಗೆ ನಾವು ಕೈಜೋಡಿಸುತ್ತೇವೆ ಎಂದು ಕಿಡಿಕಾರಿದರು.ಶಾಸಕರ ಮತ್ತು ವಿಧಾನ ಪರಿಷತ್ ಸದಸ್ಯರ ನಿಧಿ ಸ್ಥಗಿತಗೊಳಿಸಿದ್ದಾರೆ. ದಯಮಾಡಿ ಸಿಎಂ ಶಾಸಕರ ನಿಧಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ ರೇವಣ್ಣ, ಸರ್ಕಾರದ ನಡೆ ಬಗ್ಗೆ ಗರಂ ಆದರು.Sign in to your account
Username or Email Address


Password

 Remember Me


