ಕಾರವಾರ: ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ತರಬೇತಿ ಪಡೆಯುತ್ತಿದ್ದ ಇಬ್ಬರು ವೈದ್ಯರು ಕೊರೊನಾಗೆ ಹೆದರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪತಂಜಲಿ ಆಸ್ಪತ್ರೆಯಲ್ಲಿ ನಡೆದಿದೆ.ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಆರು ಜನ ರೋಗಿಗಳಿದ್ದು ಇವರಿಗೆ ಚಿಕಿತ್ಸೆ ಕೊಡಲು ತರಬೇತಿ ನೀಡಿ ಇಬ್ಬರು ವೈದ್ಯರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಕಾರ್ ಪಾರ್ಕ್ ಮಾಡಿ ಬರುವುದಾಗಿ ಹೇಳಿ ಹೋದ ಈ ವೈದರು ಮೊಬೈಲ್ ಸ್ವಿಚ್ ಆಫ್ ಮಾಡಿ ಪತಂಜಲಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.ಕರ್ತವ್ಯ ಲೋಪ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಆರ್.ರೋಷನ್ ರಿಂದ ನೋಟಿಸ್ ನೀಡಿದ್ದು ಏಳು ದಿನದಲ್ಲಿ ಉತ್ತರ ನೀಡದಿದ್ದರೆ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಯವರು ಸಹ ಕೊರೊನಾ ರೋಗಿಗಳನ್ನು ಹೊರತುಪಡಿಸಿ ಇತರ ಕಾಯಿಲೆ ರೋಗಿಗಳಿಗೆ ಚಿಕಿತ್ಸೆ ನೀಡುತಿಲ್ಲ. ಹೀಗೆ ಮಾಡಿದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ತೊಂದರೆಯಾಗುತ್ತದೆ. ಇಂತವರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.Sign in to your account
Username or Email Address


Password

 Remember Me


