ಮುಂಬೈ: 21 ತಬ್ಲಿಘಿಗಳನ್ನು ಪತ್ತೆ ಹಚ್ಚಿದ್ದ ಮುಂಬೈ ನಗರದ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ ವ್ಯಕ್ತಿಗಳು ಕಡ್ಡಾಯವಾಗಿ ಆಸ್ಪತ್ರೆಗೆ ತೆರಳಿ ವೈದ್ಯಕೀಯ ಪರೀಕ್ಷೆ ನಡೆಸಬೇಕೆಂದು ಸೂಚಿಸಲಾಗಿತ್ತು. ಆದರೆ ವಿದೇಶದಿಂದ ಆಗಮಿಸಿದ ವ್ಯಕ್ತಿಗಳು ಪರೀಕ್ಷೆ ನಡೆಸದೇ ಮಸೀದಿ ಮತ್ತು ಕೆಲ ಶಿಕ್ಷಣ ಸಂಸ್ಥೆಯಲ್ಲಿ ಅವಿತುಕೊಂಡಿದ್ದರು.ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಈ ವ್ಯಕ್ತಿಗಳು ಮುಂಬೈ ಕೆಲ ಸ್ಥಳಗಳಲ್ಲಿ ಅವಿತುಕೊಂಡಿದ್ದಾರೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.ಖಚಿತ ಮಾಹಿತಿ ಪಡೆದು ಮಸೀದಿ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಇನ್ಸ್‌ಪೆಕ್ಟರ್‌ 13 ಬಾಂಗ್ಲಾದೇಶ ಮತ್ತು 8 ಮಂದಿ ಮಲೇಷ್ಯಾದ ಪ್ರಜೆಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಕೇಂದ್ರಕ್ಕೆ ಹಾಕಿದ್ದರು.ಕ್ವಾರಂಟೈನ್ ಕೇಂದ್ರಕ್ಕೆ ದಾಖಲಾದ 21 ವಿದೇಶಿ ಪ್ರಜೆಗಳು ಮತ್ತು ಆಶ್ರಯ ನೀಡಿದ್ದ ಟ್ರಸ್ಟಿಗೆ ಕೊರೊನಾ ಪಾಸಿಟಿವ್ ಬಂದಿದೆ.ಈ ಘಟನೆ ನಡೆದ ಕೆಲ ದಿನಗಳ ಬಳಿಕ ಇನ್ಸ್‌ಪೆಕ್ಟರ್‌ಗೆ ಅವರಿಗೆ ಕೋವಿಡ್-19 ಲಕ್ಷಣಗಳು ಕಾಣಿಸಿದೆ. ಬಳಿಕ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿದ್ದು ಶುಕ್ರವಾರ ಪಾಸಿಟಿವ್ ಬಂದಿದೆ. ಈಗ ಇನ್ಸ್‌ಪೆಕ್ಟರ್‌ ಅವರನ್ನು ನಾಸಿಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಕ್ರಮವಾಗಿ ವಿದೇಶಿ ಪ್ರಜೆಗಳನ್ನು ಬಚ್ಚಿಟ್ಟಿದ್ದಕ್ಕೆ ಮಸೀದಿ ಮತ್ತು ಶಿಕ್ಷಣ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.Sign in to your account
Username or Email Address


Password

 Remember Me


