ತುಮಕೂರು: ಕಿಲ್ಲರ್ ಕೊರೊನಾ ಕಾಲಿಟ್ಟಾಗಿನಿಂದ ಪೊಲೀಸರು ಕೂಡ ಕಾಲಿಗೆ ಚಕ್ರಕಟ್ಟಿಕೊಂಡು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತಿದ್ದಾರೆ. ಆದರೆ ಅವರನ್ನೇ ನಂಬಿಕೊಂಡಿರುವ ಅವರ ಕುಟುಂಬದವರು ದಿನ ನಿತ್ಯ ಆತಂಕದಲ್ಲೇ ದಿನ ದೂಡುತಿದ್ದಾರೆ.ಈ ನಡುವೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ ಅವರ ಕುಟುಂಬದವ ಆತ್ಮಸ್ಥೈರ್ಯ ತುಂಬವ ಕೆಲಸಕ್ಕೆ ಮಾಡಿದ್ದಾರೆ. ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಹಾಗೂ ವಿವಿಧಡೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕುಟುಂಬದವರಿಗೆ ಮೊಬೈಲ್ ಮೂಲಕ ವಿಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ.ತುಮಕೂರು ಎಸ್ಪಿಯ ನೂತನ ಪ್ರಯೋಗಕ್ಕೆ ಕುಟುಂಬದವರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಸ್ವತಃ ಎಸ್ಪಿ ವಿಡಿಯೋ ಕಾಲ್ ಮಾಡಿ ತಮ್ಮ ತಮ್ಮ ಕುಟುಂಬದ ಪೊಲೀಸ್ ಸಿಬ್ಬಂದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನೀವು ಕುಟುಂಬದ ಸದಸ್ಯರು ಮನೆಯಲ್ಲೇ ಉಳಿದು ತಮ್ಮವರಿಗೆ ಬೆಂಬಲ ಸೂಚಿಸಿ ಎಂದು ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


