ಹಾವೇರಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಜಾರಿಮಾಡಿರುವ ಲಾಕ್‍ಡೌನ್‍ನಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರಲಾಗದೇ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಪಪ್ಪಾಯಿ ಜಮೀನಿನಲ್ಲಿಯೇ ಹಾಳಾಗುತ್ತಿರೋದನ್ನ ಕಂಡು ರೈತ ಕಂಗಾಲಾಗಿದ್ದಾರೆ.ದೇವರಗುಡ್ಡ ಗ್ರಾಮದ ರೈತ ಹನುಮಂತಪ್ಪ ನಾಯರ್ ತಮ್ಮ ಮೂರು ಎಕ್ರೆ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆದಿದ್ದರು. ಪಪ್ಪಾಯಿ ರೈತರ ನಿರೀಕ್ಷೆಗೂ ಮೀರಿ ಉತ್ತಮ ಫಸಲು ಬಂದಿತ್ತು. ಆದ್ರೆ ಲಾಕ್‍ಡೌನ್‍ನಿಂದ ಖರೀದಿಗೆ ವ್ಯಾಪಾರಸ್ಥರು ಬರದೆ ಪಪ್ಪಾಯಿ ಜಮೀನಿನಲ್ಲಿ ಹಾಳಾಗುತ್ತಿದೆ. ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಪಪ್ಪಾಯಿ ಹಾಳಾಗ್ತಿರೋದಕ್ಕೆ ರೈತ ಹನುಮಂತಪ್ಪ ಕಣ್ಣೀರಿಡುತ್ತಿದ್ದಾರೆ.ಜಿಲ್ಲಾಡಳಿತ ಜಮೀನಿನಲ್ಲಿ ಕೊಳೆಯುತ್ತಿರೋ ಪಪ್ಪಾಯಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಿಕೊಡಬೇಕು. ಇಲ್ಲದಿದ್ದರೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಹೀಗೆ ರೈತರು ನಷ್ಟ ಅನುಭವಿಸುತ್ತಿದ್ದರೆ ಜೀವನ ಮಾಡೋದು ಹೇಗೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


