ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ ತಂದೆಗೆ ಸೋಂಕು ಹಬ್ಬಿದೆ. ಬೆಳಗಾವಿಯಲ್ಲಿ ತಬ್ಲಿಘಿ ಪ್ರಕರಣವೊಂದು ದಾಖಲಾಗಿದೆ. ಮೈಸೂರಲ್ಲಿ 2 ಕೇಸ್ ಪತ್ತೆಯಾಗಿದೆ. ಮಂಡ್ಯಕ್ಕೂ ನಂಜನಗೂಡು ಸೋಂಕು ಹಬ್ಬಿದೆ. ಬೆಂಗಳೂರಿನಲ್ಲಿ ಇಂದೊಂದೇ ದಿನ 5 ಪ್ರಕರಣ ದಾಖಲಾಗಿ ಒಟ್ಟು ಕೇಸ್ 68ಕ್ಕೆ ಏರಿಕೆಯಾಗಿದೆ.ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ರಾಜ್ಯ ಆರೋಗ್ಯ ಇಲಾಖೆ ಸರ್ವ ಪ್ರಯತ್ನ ನಡೆಸಿದೆ. ಮುಂದಿನ 5 ದಿನಗಳಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯುವುದಕ್ಕಾ `3 ಟಿ’ ಅಸ್ತ್ರಗಳನ್ನು ಬಳಸಲು ಮುಂದಾಗಿದೆ.‘3ಟಿ’ ಅಸ್ತ್ರ ಅಂದ್ರೆ ಏನು?:
ಕೊರೊನಾ ವಿರುದ್ಧ ‘3ಟಿ’ ಅಂದ್ರೆ ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‍ಮೆಂಟ್ ಆಗಿದೆ. ಮೊದಲು ಸೋಂಕಿತರ ಜೊತೆ ಸಂಪರ್ಕದಲ್ಲಿರುವವರ ಟ್ರೇಸ್ ಮಾಡುವುದು. ಬಳಿಕ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದವರ ಶೀಘ್ರ ಪತ್ತೆ ಹಚ್ಚುವುದು. ಸಂಪರ್ಕದಲ್ಲಿರುವವರ ಸಂಖ್ಯೆ ಅದೆಷ್ಟೇ ದೊಡ್ಡದಿದ್ರೂ ತತ್‍ಕ್ಷಣ ಟೆಸ್ಟಿಂಗ್ ಮಾಡುವುದು ಮುಖ್ಯವಾಗಿದೆ ಎಂದು ಆರೋಗ್ಯ ಇಲಾಖೆಯು ವೈದ್ಯರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಸೋಂಕಿನ ಗುಣಲಕ್ಷಣ ಕಾಣಿಸಿಲ್ಲ ಅಂತ ನಿರ್ಲಕ್ಷ್ಯ ತೋರುವಂತಿಲ್ಲ. ಸೋಂಕು ಪೀಡಿತ ಪ್ರದೇಶದಲ್ಲಿ ಸ್ಕ್ರೀನಿಂಗ್ ಕಡ್ಡಾಯ ಮಾಡಬೇಕು. ಸೋಂಕಿತರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್‍ನಲ್ಲಿಟ್ಟು ಚಿಕಿತ್ಸೆ ಕೊಡಬೇಕು. ಐಸೋಲೇಷನ್‍ನಲ್ಲಿ ಇಡದಿದ್ದರೆ ಒಬ್ಬ ಸೋಂಕಿತ 406 ಮಂದಿಗೆ ವೈರಸ್ ಹರಡಬಲ್ಲ. ತಕ್ಷಣ ಸೋಂಕಿತರು, ಸಂಪರ್ಕದಲ್ಲಿ ಇದ್ದವರ ಪತ್ತೆ ಹಚ್ಚಿ, ಟೆಸ್ಟ್ ಮಾಡಿ ಟ್ರೀಟ್‍ಮೆಂಟ್ ಕೊಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.Sign in to your account
Username or Email Address


Password

 Remember Me


