ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ ಮಾತನಾಡಿದ ಡಿಸಿ ದೀಪಾ ಚೋಳನ್ ಅವರು, ಹಿಂಗಾರು ಹಂಗಾಮಿನ ಕಡಲೆ ಕಾಳು ಉತ್ಪನ್ನವನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಯೋಜನೆ ಅಡಿ ಖರೀದಿಸಿಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯನ್ನು ಏಜೇನ್ಸಿಯಾಗಿ ಗುರುತಿಸಲಾಗಿದೆ. ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಲಿಗೆ 4,875 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.ಹುಬ್ಬಳ್ಳಿ, ಧಾರವಾಡ ಎಪಿಎಂಸಿಯ ಮುಖ್ಯ ಮಾರುಕಟ್ಟೆ ಪ್ರಾಣಾಂಗಗಳು ಸೇರಿದಂತೆ ಜಿಲ್ಲೆಯ ಹುಬ್ಬಳ್ಳಿ, ಉಪ್ಪಿನಬೆಟಗೇರಿ, ನೂಲ್ವಿ, ಹೆಬಸೂರು, ಕುಂದಗೋಳ, ಯಲಿವಾಳ, ಯರಗುಪ್ಪಿ, ಅಣ್ಣಿಗೇರಿ, ನವಲಗುಂದ, ಮೊರಬ ಹಾಗೂ ತಿರ್ಲಾಪುರ ಗ್ರಾಮಗಳಲ್ಲಿ ಆರಂಭಿಸಿರುವ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ರೈತರ ನೋಂದಣಿಗೆ ಏಪ್ರಿಲ್ 30ರವರೆಗೆ ಅವಕಾಶವಿದೆ. ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುವುದು. ರಾಜ್ಯ ಮತ್ತು ಕೇಂದ್ರ ಉಗ್ರಾಣ ನಿಗಮಗಳಿಗೆ ಈ ಪ್ರಕ್ರಿಯೆಗೆ ಸಹಕಾರ ನೀಡಲು ತಿಳಿಸಲಾಗುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಗೋವಿನಜೋಳ ಖರೀದಿಗೆ ಮಾಜಿ ಶಾಸಕ ಕೊನರಡ್ಡಿ ಆಗ್ರಹ:
ಕಡಲೆ ಖರೀದಿ ಕೇಂದ್ರ ಬಂದ್ ಮಾಡಬಾರದಿತ್ತು, ರೈತರು ಗೋವಿನಜೋಳ ಮನೆಯಲ್ಲಿಟ್ಟುಕೊಂಡು ಕುಳಿತಿದ್ದಾರೆ. ಮೊನ್ನೆ ಕೃಷಿ ಸಚಿವರು ಗೋವಿನಜೋಳ ಖರೀದಿ ಕೇಂದ್ರ ಆರಂಭಿಸ್ತೇವೆ ಅಂದಿದ್ದರು. ಆದರೆ ಇನ್ನೂ ಆರಂಭವಾಗಿಲ್ಲ ಎಂದು ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಹೇಳಿದರು.ಧಾರವಾಡದಲ್ಲಿ ಮಾತನಾಡಿದ ಅವರು, ಸರ್ಕಾರ ಎರಡ್ಮೂರು ತಿಂಗಳ ರೇಷನ್ ಮುಂಚಿತ ಕೊಡ್ತೇವಿ ಎಂದಿದೆ. ಆದರೆ ಅಧಿಕಾರಿಗಳು ಬೆರಳಚ್ಚು ಕೇಳುತ್ತಲೇ ಇದ್ದಾರೆ. ಸರ್ಕಾರದ ನಿಯಮ ಸರಿಯಾಗಿ ಜಾರಿಯಾಗಬೇಕು ಎಂದು ಮನವಿ ಮಾಡಿದರು. ಹಾಗೆಯೇ ರೈತರ ಉತ್ಪನ್ನ ತರಲು ತೊಂದರೆ ಕೊಡಬಾರದು. ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಡಿಸಿಗೆ ಕೇಳಿದ್ದೇವೆ, ಜೊತೆಗೆ ಸಿಎಂ ಪರಿಹಾರ ನಿಧಿಗೆ 50 ಸಾವಿರ ನೀಡಿದ್ದೇವೆ ಎಂದರು.Sign in to your account
Username or Email Address


Password

 Remember Me


