ಬೆಂಗಳೂರು: ಜೀವ ರಕ್ಷಕ ಅಂಬುಲೆನ್ಸ್ ಇಬ್ಬರು ವಾಹನ ಸವಾರರನ್ನು ಬಲಿ ಪಡೆದಿರುವ ಘಟನೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್‌ ರಸ್ತೆಯ ಜಂಕ್ಷನ್ ನಲ್ಲಿ ನಡೆದಿದೆ.ಇಬ್ರಾಹಿಂ ಖಲೀಲ್ (30) ಹಾಗೂ ಮನ್ಸೂರ್ (28) ಅಂಬುಲೆನ್ಸ್ ಗೆ ಬಲಿಯಾದ ಯುವಕರು. ಖಲೀಲ್ ಹಾಗೂ ಮನ್ಸೂರ್ ಓಲ್ಡ್ ಏರ್‌ಪೋರ್ಟ್‌ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಇಬ್ಬರು ನಾಗರವಾರದ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.ಯಮಸ್ವರೂಪಿ ಒನ್ ವೇನಲ್ಲಿ ಅತಿವೇಗವಾಗಿ ಬಂದ ಅಂಬುಲೆನ್ಸ್ ಡಿಯೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಯೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಯಿತು. ಮಂಗಳವಾರ ರಾತ್ರಿ ಸುಮಾರು 9.00 ಗಂಟೆಗೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು.ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಇಂದು ಮಧ್ಯಾಹ್ನ 12.00 ಗಂಟೆಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 304 ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಂಬುಲೆನ್ಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


