ಬೆಂಗಳೂರು: ದೇಶದಲ್ಲಿ ರೈತರ ಸಾಲಮನ್ನಾ ಮಾಡುವುದು ಒಳ್ಳೆಯ ಸಂಪ್ರದಾಯ ಅಲ್ಲ. ಸಾಲಮನ್ನಾ ಮಾಡುತ್ತಾರೆ ಎಂದಾದರೆ ನಾನು ಕೂಡ ಬ್ಯಾಂಕಿನಲ್ಲಿ ಸಾಲ ಪಡೆಯುತ್ತಿದ್ದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ 107ನೇ ಭಾರತೀಯ ಸೈನ್ಸ್ ಕಾಂಗ್ರೆಸ್ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ದೇಶ ಶೇ.60ರಷ್ಟು ಕೃಷಿ ಅವಲಂಬಿತವಾಗಿದೆ. ನಾನು ಒಬ್ಬ ರೈತನ ಮಗ. ಆದರೆ ರೈತರ ಸಾಲಮನ್ನಾ ತಾತ್ಕಾಲಿಕ ಪರಿಹಾರವಾಗುತ್ತದೆ ಎಂದರು.ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು. ಕೇವಲ ರೈತರ ಸಾಲಮನ್ನಾ ಮಾಡಿದರೆ ಸಮಸ್ಯೆ ಪರಿಹಾರ ಆಗಲ್ಲ. ಆದ್ದರಿಂದ ರೈತರ ಸಾಲಮನ್ನಾ ಒಳ್ಳೆಯ ಯೋಜನೆ ಅಲ್ಲ ಎಂದಿದ್ದಾರೆ.I would like to conclude my speech by emphasizing that all paths of science must lead to creating a better tomorrow. As we begin the new year & a new decade in our country’s history, we must build on our past & build new bridges through science and technology to a brighter future pic.twitter.com/ypsxhcMW70— Vice President of India (@VPIndia) January 7, 2020Sign in to your account
Username or Email Address


Password

 Remember Me


