ಬೆಂಗಳೂರು: ಸಾವರ್ಕರ್ ಬಗ್ಗೆ ಅಶ್ಲೀಲವಾಗಿ ಪುಸ್ತಕವನ್ನು ಬರೆಯುವ ಲೇಖಕ ಹಾಗೂ ಅದನ್ನು ಪ್ರಕಟಿಸುವವರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಿಎಂ ಮತ್ತು ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಪುಸ್ತಕವನ್ನು ದೇಶಾದ್ಯಂತ ತಕ್ಷಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಆಗ್ರಹಿಸಿದೆ.ಹಿಂದೂ ಜನಜಾಗೃತಿ ಸಮಿತಿ, ಹಿಂದೂ ಮಹಾಸಭಾದ ವತಿಯಿಂದ ವೀರ ಸಾವರ್ಕರ್ ಬಗ್ಗೆ ಕೆಟ್ಟದಾಗಿ ಪುಸ್ತಕದಲ್ಲಿ ಬರೆದಿರುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ಸಿಎಂ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಯಂತ್ ಮತ್ತು ಹಿಂದೂ ಮಹಾಸಭೆಯ ಲೋಹಿತ್ ಮುಂತಾದವರು ಉಪಸ್ಥಿತರಿದ್ದರು.ಭೋಪಾಲ್‍ನಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ವೀರ್ ಸಾವರ್ಕರ್ ಕಿತನೆ ವೀರ್? (ವೀರ ಸಾವರ್ಕರ್ ಎಷ್ಟು ವೀರರು?) ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಅತ್ಯಂತ ತ್ಯುಚ್ಛವಾಗಿ ದ್ವೇಷ ಪೂರಕವಾಗಿ ಕಟ್ಟುಕಥೆಗಳನ್ನು ಬರೆಯಲಾಗಿದೆ. ಇದರಿಂದ ಕಾಂಗ್ರೆಸ್ಸಿನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳು ಮಟ್ಟಕ್ಕೆ ಹೋಗಬಹುದು ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸಾವರ್ಕರ್ ಮಾತ್ರವಲ್ಲದೇ ಯಾವುದೇ ರಾಷ್ಟ್ರಪುರುಷರು ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ. ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.ಕಾಂಗ್ರೆಸ್ಸಿನ ಶಿಬಿರದಲ್ಲಿ ದೇಶದ ಕ್ರಾಂತಿಕಾರರು ಸಲಿಂಗ ಸಂಬಂಧವನ್ನು ಇಟ್ಟುಕೊಳ್ಳುವ, ಮಸೀದಿಯ ಮೇಲೆ ಕಲ್ಲೆಸೆಯುವ, ಅದೇ ರೀತಿ ಅಲ್ಪಸಂಖ್ಯಾತ ಮಹಿಳೆಯರ ಬಲಾತ್ಕಾರ ಮಾಡುವವರಿದ್ದರು ಎಂದು ಹೇಳುವ ಅತ್ಯಂತ ಕೀಳುಮಟ್ಟದ ಪುಸ್ತಕವನ್ನು ವಿತರಿಸಿದ್ದಾರೆ. ಇದನ್ನ ಕೂಡಲೇ ನಿಷೇಧಿಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.Sign in to your account
Username or Email Address


Password

 Remember Me


