ಬೆಂಗಳೂರು: ಬಿಡಿಎಯು ಪೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಸ್ವಾಧೀನ ಪಡೆಸಿಕೊಳ್ಳುತ್ತಿರುವ ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರಕ್ಕೆ ಆಗ್ರಹಿಸಿ, ನೂರಾರು ರೈತರು ಬಿಡಿಎ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಸತ್ಯಾಗ್ರಹ ನಡೆಯುತ್ತಿದೆ. 15 ವರ್ಷದ ಹಿಂದಿನ ಯೋಜನೆಗೆ ತ್ವರಿತಗತಿಯಲ್ಲಿ ಸರ್ಕಾರ ಪರಿಹಾರ ನೀಡಬೇಕು. 65 ಕಿಲೋ ಮೀಟರ್ ಯೋಜನೆಗಾಗಿ ರೈತರ ಭೂಮಿಯನ್ನು ಬಿಡಿಎ ವಶಪಡಿಸಿಕೊಂಡಿತ್ತು. ಆದರೆ ಸ್ವಾಧೀನ ಮಾಡಿಕೊಂಡಿರುವ ರೈತರ ಭೂಮಿಗೆ ಸರ್ಕಾರ ನಿಗದಿತ ಬೆಲೆ ನೀಡಿಲ್ಲ. ರೈತರ ಭೂಮಿಗೆ ಎಕರೆಗೆ 5 ಕೋಟಿ ಪರಿಹಾರ ನೀಡಬೇಕು ಎಂಬುದು ಭೂಮಿ ಕಳೆದುಕೊಳ್ಳುತ್ತಿರುವ ರೈತರ ಆಗ್ರಹವಾಗಿದೆ.ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬಂದ ಸಿಎಂ ರಾಜಕೀಯವ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಈ ಬಗ್ಗೆ ಸರ್ಕಾರದ ಅಡ್ವಕೇಟ್ ಜನರಲ್ ಜೊತೆ ಮಾತನಾಡುತ್ತೇನೆ. ಅದಕ್ಕೂ ಮುನ್ನ ನಿಮ್ಮ ರೈತ ಮುಖಂಡರ ಜೊತೆ ಮಾತನಾಡಿ, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಚರ್ಚೆ ಮಾಡಿದ ಬಳಿಕ ನೇರವಾಗಿ ಸಿಎಂ ಜೊತೆ ಮಾತನಾಡುತ್ತೇನೆ. ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕಲ್ಪಿಸಿಕೊಡಬೇಕು ಎಂಬುದು ನನ್ನ ಅಪೇಕ್ಷೆ ಕೂಡ ಎಂದು ಹೇಳಿದ್ರು.ರೈತರ ಜೊತೆ ಮಾತನಾಡುವ ವೇಳೆ, ಎಸ್ ಆರ್ ವಿಶ್ವನಾಥ್ ಅವರನ್ನು ಕೆಲ ರೈತರು ತರಾಟೆಗೆ ತೆಗೆದುಕೊಂಡ ಪ್ರಸಂಗವು ನಡೆಯಿತು. ಯಾವುದೇ ಕಾರಣಕ್ಕೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈ ಬಿಡಲ್ಲ ಎಂದು ಹೇಳಿ ರೈತರು ಬಿಡಿಎ ಮುಂದೆಯೇ ಅಡುಗೆ ಮಾಡುತ್ತಾ ಪ್ರತಿಭಟಿಸಿದರು.Sign in to your account
Username or Email Address


Password

 Remember Me


