ದಾವಣಗೆರೆ: ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭದ ವೇಳೆ ಶಾಸಕ ಎಂ.ಪಿ. ರೇಣುಕಾಚಾರ್ಯ ಕೆಎಸ್ಆರ್‌ಟಿಸಿ ಬಸ್ ಚಾಲನೆ ಮಾಡಿದ ಹಿನ್ನಲೆ ಹೊನ್ನಾಳಿ ಡಿಪೋ ಮ್ಯಾನೇಜರ್ ಅವರಿಗೆ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಡಿಸಿ ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ.ಸೋಮವಾರ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಗೊಲ್ಲರಹಳ್ಳಿ, ಬೆನಕಹಳ್ಳಿ, ಉಜ್ಜನಿಪುರ, ರಾಂಪುರ, ಸಾಸ್ವೇಹಳ್ಳಿ ಗ್ರಾಮಗಳ ಮಾರ್ಗವಾಗಿ ಹೊಸದಾಗಿ ಕೆಎಸ್ಆರ್‌ಟಿಸಿ ಬಸ್ ಚಾಲನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಂಪಿ ರೇಣುಕಾಚಾರ್ಯ ಸ್ವತಃ ತಾವೇ ಚಾಲಕನ ಯೂನಿಫಾರಂ ಹಾಕಿಕೊಂಡು ಗ್ರಾಮಗಳಿಗೆ ಬಸ್ ಚಲಾಯಿಸಿದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಡಿಸಿ ಟಿ ಆರ್ ನವೀನ್ ಕುಮಾರ್ ಘಟನೆಯ ಬಗ್ಗೆ ಹೊನ್ನಾಳಿ ಘಟಕ ವ್ಯವಸ್ಥಾಪಕ ಮಹೇಶ್ವರಪ್ಪರಿಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದಾರೆ.ರೇಣುಕಾಚಾರ್ಯ ಬಸ್ ಚಲಾಯಿಸಿದ್ದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲಕನ ಸಮವಸ್ತ್ರ ಧರಿಸಿ ಸುಮಾರು 60 ಕಿ.ಮೀ ಬಸ್ ಓಡಿಸಿದ್ದರು. ಕೆಎಸ್ಆರ್‌ಟಿಸಿ ಬಸ್ ಗಳನ್ನು ಕೇವಲ ನಿಗಮದ ಚಾಲಕರು ಹಾಗೂ ಇಲಾಖೆಯ ಪರವಾನಿಗೆ ಪಡೆದವರು ಮಾತ್ರ ಚಲಾಯಿಸಬೇಕು. ಈ ನಿಯಮವನ್ನು ಉಲ್ಲಂಘಿಸಿ  ಶಾಸಕರು ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್ ಚಲಾಯಿಸಿರುವುದಕ್ಕೆ ವಿವರಣೆ ನೀಡುವಂತೆ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ನೋಟಿಸ್ ನೀಡಿದ್ದಾರೆ. Sign in to your account
Username or Email Address


Password

 Remember Me


