ರಾಯಚೂರು: ಸಿಎಎ ಬೆಂಬಲಿಸಿ ಬಳ್ಳಾರಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಬಳ್ಳಾರಿನಗರ ಶಾಸಕ ಸೋಮಶೇಖರ್ ರೆಡ್ಡಿ ನೀಡಿದ್ದ ಪ್ರಚೋದನಾತ್ಮಕ ಹೇಳಿಕೆಯನ್ನ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರಾಯಚೂರು ನಾಗರೀಕ ಸಮಿತಿ ಕಾರ್ಯಕರ್ತರು ಕೂಡಲೇ ಸೋಮಶೇಖರ್ ರೆಡ್ಡಿಯನ್ನ ಬಂಧಿಸುವಂತೆ ಆಗ್ರಹಿಸಿದರು. ದೇಶದ್ರೋಹದ ಹೇಳಿಕೆ ನೀಡಿರುವ ಶಾಸಕರನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಅಂತ ಒತ್ತಾಯಿಸಿದರು. ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ- ರಾಯಚೂರಿನಲ್ಲಿ ಸೋಮಶೇಖರ್ ರೆಡ್ಡಿ ವಿರುದ್ಧ ದೂರುಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕೃತಿ ದಹನಕ್ಕೆ ಅವಕಾಶ ನೀಡದ ಪೋಲಿಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪೋಲಿಸರೊಂದಿಗೆ ಮಾತಿನ ಚಕಮಕಿ ನಡೆಸಿದ್ರು. ಬಳಿಕ ಮನುಸ್ಮೃತಿಯನ್ನ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು.Sign in to your account
Username or Email Address


Password

 Remember Me


