ಬಾಗಲಕೋಟೆ/ಗದಗ: ಗದಗ ಜಿಲ್ಲೆಯಲ್ಲಿ 25 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದ್ದಾರೆ.ಗದಗ ಜಿಲ್ಲಾ ಕೇಂದ್ರದಲ್ಲಿ 3.39 ಕೋಟಿ ರೂ.ವೆಚ್ಚದ ಡಾ.ಬಾಬು ಜಗಜೀವನರಾಂ ಭವನ, 42 ಬಾಬು ಜಗಜೀವನರಾಂ ಭವನಗಳು, ಗದಗ ಬೆಟಗೇರಿ ನಗರದ ಹತ್ತಿರ 2.32 ಕೋಟಿ ರೂ. ಪರಿಶಿಷ್ಠ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ, ಗದಗ ಬೆಟಗೇರಿ ನಗರದ ಹುಯೀಲಗೋಳ ರಸ್ತೆಯಲ್ಲಿ 3 ಕೋಟಿ 38 ಲಕ್ಷ ರೂ.ಗಳ ಅನುದಾನದಲ್ಲಿ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರ ವೃತ್ತಿಪರ ಬಾಲಕಿಯರ ವಸತಿ ನಿಲಯ, ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜನ್ನು 1046.00 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದೆ. ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮ ಯೋಜನೆಗಳಡಿ ಗದಗ-ಬೆಟಗೇರಿ ಅವಳಿ ನಗರದಲ್ಲಿ 5 ಎಕರೆ 10 ಗುಂಟೆ ಜಾಗದಲ್ಲಿ ವಸತಿ ರಹಿತ ಹರಣಶಿಕಾರಿ ಸಮುದಾಯದವರಿಗೆ 109 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಅವುಗಳಲ್ಲಿ 220.00 ಲಕ್ಷ ರೂ.ಗಳ ಅನುದಾನದಲ್ಲಿ 40 ಮನೆಗಳು ಪೂರ್ಣಗೊಂಡಿರುತ್ತವೆ.ಗದಗ ತಾಲೂಕಿನ ವಸತಿ ನಿಲಯಗಳಲ್ಲಿರುವ ಕಂಪ್ಯೂಟರ್ ಲ್ಯಾಬ್ ಗಳು, ಅಭ್ಯಾಸ ಕೊಠಡಿಗಳು ಮತ್ತು ನಿಲಯಗಳ ನವೀಕರಣ, ದುರಸ್ತಿ ಮತ್ತು ನೂತನ ಕೊಠಡಿಗಳ ನಿರ್ಮಾಣ ಮುಂತಾದ ಕಾಮಗಾರಿಗಳನ್ನು 349.00 ಲಕ್ಷ ರೂ.ಗಳ ಅನುದಾನದಲ್ಲಿ ನಿರ್ಮಿಸಲಾಗಿದ್ದು, ಈ ಕಾಮಗಾರಿಗಳನ್ನು ಡಿಸಿಎಂ ಕಾರಜೋಳ ಉದ್ಘಾಟಿಸಿದರು.ಶಾಸಕರಾದ ಶ್ರೀ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಪೆದ್ದಪ್ಪಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಮಾದರ್, ಜಿಲ್ಲಾಧಿಕಾರಿ ಹಿಮೇಮಠ ಮತ್ತಿತರರು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


