ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಸತತ 7 ಗಂಟೆಗಳ ಕಾಲ ಅಡ್ಮಿಟ್ ಮಾಡಿಕೊಳ್ಳದೆ ಅಂಬುಲೆನ್ಸ್‌ನಲ್ಲಿಯೇ ಬಿಟ್ಟು ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಅಮಾನವೀಯತೆ ಮೆರೆದಿದ್ದಾರೆ.ಕೋಲಾರ ತಾಲೂಕಿನ ಮಾಲೂರು ಮೂಲದ ಶ್ರೀನಿವಾಸ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಮಧ್ಯಾಹ್ನ 2 ಗಂಟೆಗೆ ಶ್ರೀನಿವಾಸ್ ಕುಟುಂಬದವರು ಅವರನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆತಂದರು. ಆದರೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎನ್ನುವ ಕಾರಣಕ್ಕೆ ರಾತ್ರಿ 9 ಗಂಟೆಯಾದರೂ ಸಿಬ್ಬಂದಿ ಗಾಯಾಳು ಶ್ರೀನಿವಾಸ್ ನನ್ನು ಅಡ್ಮಿಟ್ ಮಾಡಿಕೊಂಡಿರಲಿಲ್ಲ. ಇದನ್ನೂ ಓದಿ: ದಟ್ಟಾರಣ್ಯ, ಕಲ್ಲು ಮುಳ್ಳಿನ ಹಾದಿ – ಆಸ್ಪತ್ರೆಗೆ ಸಾಗಲು ಗರ್ಭಿಣಿಯರಿಗೆ ಡೋಲಿಯೇ ಸವಾರಿಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆಯೇ ತಕ್ಷಣ ಎಚ್ಚತ್ತ ವೈದ್ಯರು, ಗಾಯಾಳು ಶ್ರೀನಿವಾಸ್‍ನನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಂಡಿದ್ದಾರೆ. ಮಧ್ಯಾಹ್ನದಿಂದ ಇಲ್ಲದ ಬೆಡ್ ದಿಢೀರ್ ಅಂತ ಹೇಗೆ ಬಂತು ಅನ್ನೋದು ಸದ್ಯದ ಪ್ರಶ್ನೆಯಾಗಿದೆ. ಇದನ್ನೂ ಓದಿ: ಹೆರಿಗೆ ಬಳಿಕ ಬಾಣಂತಿಯರಿಗೆ ನರಕ ದರ್ಶನ – ಬೆಡ್‍ಗಳಿಲ್ಲದೆ ನೆಲದ ಮೇಲೆಯೇ ನರಳಾಟಜೀವ ಕೈಯಲ್ಲಿ ಇಟ್ಟುಕೊಂಡು ಚಿಕಿತ್ಸೆಗಾಗಿ ದೂರದ ಊರುಗಳಿಂದ ಬಂದ ರೋಗಿಗಳಿಗೆ ಈ ರೀತಿ ಕನಿಷ್ಠ ಚಿಕಿತ್ಸೆಯೂ ಸಿಗದೇ ಅಂಬುಲೆನ್ಸ್‌ನಲ್ಲೇ ಬಿಡೋದು ಎಷ್ಟು ಸರಿ? ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಈ ನಿರ್ಲಕ್ಷ್ಯ ದ ಬಗ್ಗೆ ಆರೋಗ್ಯ ಸಚಿವರು ಉತ್ತರ ನೀಡಬೇಕಿದೆ.Sign in to your account
Username or Email Address


Password

 Remember Me


