ಆನೇಕಲ್(ಬೆಂಗಳೂರು): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಮೇಲೆ ಆಸಿಡ್ ಎರಚಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ನಡೆದಿದೆ.ಆಸಿಡ್ ದಾಳಿಗೆ ಒಳಗಾದವನನ್ನು ಜ್ಯೋತಪ್ಪ (51) ಎಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯ ಹೆನ್ನಾಗರ ಬಳಿಯ ಹೊಸಹಳ್ಳಿ ಗ್ರಾಮದ ನಿವಾಸಿಯಾದ ಜ್ಯೋತಪ್ಪ ಸ್ಥಿತಿ ಸದ್ಯ ಚಿಂತಾನಜನಕವಾಗಿದೆ.ಜ್ಯೋತಪ್ಪ ತಮ್ಮ ಸ್ಕೂಟಿಯಲ್ಲಿ ಸಂಜೆ 6 ಗಂಟೆಯ ಸುಮಾರಿಗೆ ಜಿಗಣಿಯಿಂದ ಹೊಸಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಹೆನ್ನಾಗರ ಬಳಿ ಬರುತ್ತಿದ್ದಂತೆಯೇ ಜ್ಯೋತಪ್ಪ ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ನಂತರ ಆಸಿಡ್ ಹಾಗೂ ಪೆಟ್ರೋಲ್ ಸುರಿದು ಬೆಂಕಿಯನ್ನು ಹಚ್ಚಿ ಪರಾರಿಯಾಗಿದ್ದಾರೆ.ಬೆಂಕಿ ಹೊತ್ತಿಕೊಂಡ ಬಳಿಕ ನರಳಾಡುತ್ತ ನೆರವಿಗಾಗಿ ಕಿರುಚಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜ್ಯೋತಪ್ಪನನ್ನು ರಕ್ಷಿಸಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಿಂದ ದೇಹದ ಶೇ.60 ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.ಸದ್ಯ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಸೂರ್ಯಸಿಟಿ ಪೊಲೀಸರು ಪರಿಶೀಲನೆ ನಡೆಸಿದ್ದು ಮಾಹಿತಿ ಕಲೆಹಾಕಿ ವಿಚಾರಣೆ ನಡೆಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


