ತುಮಕೂರು: ಪ್ರಧಾನಿ ಮೋದಿ ಕಲ್ಪತರುನಾಡು ತುಮಕೂರಿಗೆ ನಿನ್ನೆಯಷ್ಟೇ ಭೇಟಿ ನೀಡಿದ್ದರು. ಇದೇ ವೇಳೆ ಪ್ರಧಾನಿಗಳ ಜೊತೆಗಿದ್ದ ಫೋಟೋಗ್ರಾಫರ್ ಕೂಡ ಜಿಲ್ಲೆಯ ಪಾವಗಡ ತಾಲೂಕಿನವರು ಎಂಬ ವಿಚಾರ ಬಹಿರಂಗಗೊಂಡಿದೆ.ಪಾವಗಡ ತಾಲೂಕಿನ ಓಬಳಾಪುರ ಮೂಲದ ಯಡಲಮ್ ಕೃಷ್ಣಮೂರ್ತಿ ಲೋಕನಾಥ್ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪ್ರಧಾನಿ ಮೋದಿಯವರ ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲೂ ಲೋಕನಾಥ್ ಅವರೇ ಛಾಯಾಗ್ರಾಹಕರಾಗಿದ್ದಾರೆ. ಪ್ರಧಾನಿ ಕಾರ್ಯಾಲಯದ ಪ್ರಸಾರ ಭಾರತಿ ಉದ್ಯೋಗಿ ಹಾಗೂ ಇಲಾಖೆಯ ಪ್ರಧಾನ ಫೋಟೋ ಹಾಗೂ ವೀಡಿಯೋಗ್ರಾಫರ್ ಎಂಬ ಮಾಹಿತಿ ತಿಳಿದು ಬಂದಿದೆ. ಯಡಲಮ್ ಕೃಷ್ಣಮೂರ್ತಿ ಅವರ ತಂದೆ ಹೆಸರಾಗಿದ್ದು, ತಮ್ಮ ಹೆಸರಿನ ಆರಂಭದಲ್ಲಿ ತಂದೆಯ ಹೆಸರು ಸೇರಿಸಿಕೊಂಡು ಯಡಲಮ್ ಕೃಷ್ಣಮೂರ್ತಿ ಲೋಕನಾಥ್ ಎಂದು ಗುರುತಿಸಿಕೊಂಡಿದ್ದಾರೆ.ಪಾವಗಡ ತಾಲೂಕಿನ ಓಬಳಾಪುರ ಇವರ ಮೂಲವಾಗಿದ್ದು, ತಂದೆ ಯಡಲಮ್ ಕೃಷ್ಣಮೂರ್ತಿ, ತಾಯಿಯ ಹೆಸರು ರತ್ನಮ್ಮ. ಓಬಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಪಾವಗಡ ಪಟ್ಟಣದಲ್ಲಿ ಪ್ರೌಢ ಶಿಕ್ಷಣ ಪಡೆದ ಇವರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿದ್ದರು. ಬೆಂಗಳೂರಲ್ಲಿ ಫೋಟೋಗ್ರಾಫಿ ಕಲಿತು ಪ್ರಸಾರ ಭಾರತಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.ತಮ್ಮ ತವರು ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಲೋಕನಾಥ್ ಅವರು, ಜ.2ರಂದು ತುಮಕೂರಿಗೆ ಆಗಮಿಸುತ್ತಿರುವುದು ಸಂತಸ ತಂದಿದೆ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ನಾಡಿನ ಜನರಲ್ಲಿ ಅಚ್ಚರಿ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.Sign in to your account
Username or Email Address


Password

 Remember Me


