ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಹಿಯಾಗಿ ಹೊಸ ವರ್ಷ ಸ್ವಾಗತಿಸಲಾಯಿತು. ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಾಡು ವಿತರಿಸಿ ಹೊಸವರ್ಷ ಸ್ವಾಗತಿಸಲಾಯಿತು.ಭಕ್ತರಿಗೆ ಒಟ್ಟಾರೆ 2 ಲಕ್ಷ ಲಾಡು ವಿತರಿಸಲಾಯಿತು. ಬದೇವಾಲಯದಲ್ಲಿ ಬೆಳಗಿನ ಜಾವ 4.30ರಿಂದ ಪೂಜಾ ಕೈಂಕರ್ಯಗಳು ನಡೆದಿದ್ದು, ಪೂಜೆ ನಂತರ ನೈವೇದ್ಯ ಪ್ರಸಾದವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು. ಮುಂಜಾನೆಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಎಲ್ಲ ಭಕ್ತರಿಗು ಲಾಡು ವಿತರಿಸಲಾಯಿತು.ಹೊಸ ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ ಹರಿದು ಬಂದಿದೆ. ಭಕ್ತರು ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷ ಸ್ವಾಗತಿಸಿದರು. ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾದರು.Sign in to your account
Username or Email Address


Password

 Remember Me


