ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ನಗರದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 2ನೇ ಹಂತದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.ಮೋದಿ ಆಗಮನ ಬೆನ್ನಲ್ಲೆ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಒತ್ತಾಯಿಸಲು ತೀರ್ಮಾನಿಸಲಾಗಿದೆ.ನರೇಂದ್ರ ಮೋದಿಯ ತುಮಕೂರಿಗೆ ಆಗಮಿಸುತ್ತಿದ್ದಂತೆ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿಲಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿ, ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ಈ ವೇಳೆ ವೀರಶೈವ ಲಿಂಗಾಯುತ ಯುವ ವೇದಿಕೆ ಪ್ರಧಾನಿ ಮೋದಿಯವರನ್ನು ಸ್ವಾಗತ ಕೋರುವುದರ ಜೊತೆಗೆ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಘೋಷಿಸಬೇಕೆಂದು ಒತ್ತಾಯಿಸಿದೆ.ತ್ರಿವಿಧ ದಾಸೋಹದ ಮೂಲಕ ನಾಡಿನ ಮನೆ ಮಾತಾಗಿದ್ದ ಶತಾಯುಷಿ ಶ್ರೀಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ನೀಡಬೇಕೆಂಬುದು ಕನ್ನಡಿಗರ ಹಲವು ವರ್ಷಗಳ ಆಸೆಯಾಗಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಈ ಹಿಂದೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಆದರೆ ನೀಡಿರಲಿಲ್ಲ, ಇದೀಗ ಮರಣೋತ್ತರವಾಗಿಯಾದರೂ ಭಾರತ ರತ್ನ ನೀಡಬೇಕೆಂಬುದು ಆಗ್ರಹ ಕೇಳಿಬಂದಿದೆ.Sign in to your account
Username or Email Address


Password

 Remember Me


