ಮಡಿಕೇರಿ: ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಒಂದು. ಆದರೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಅಪೂರ್ಣವಾಗಿ, ಶವಾಗಾರದಂತೆ ಬಾಗಿಲು ಮುಚ್ಚಿದೆ.ಶುದ್ಧ ಕುಡಿಯುವ ನೀರಿನ ಅಶುದ್ಧ ಘಟಕವೊಂದನ್ನು ಕರಿಕೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಳ್ಳುಕೊಚ್ಚಿ ಮರಾಠಿ ಮೂಲೆ ಪ್ರದೇಶದಲ್ಲಿ ಇದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರಿಕೆ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿದ್ದು, ಇದಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಜಾಗ ಗುರುತಿಸಿ ಒಂದೂವರೆ ವರ್ಷಗಳ ಹಿಂದೆ ಘಟಕ ಸ್ಥಾಪನೆ ಮಾಡಿತ್ತು. ಆದರೆ ಈ ನೀರಿನ ಘಟಕದ ಬಾಗಿಲು ಮುಚ್ಚಲಾಗಿದೆ.ಭಾಗಮಂಡಲ-ಕರಿಕೆ ಅಂತರರಾಜ್ಯ ಹೆದ್ದಾರಿ ಬದಿಯಲ್ಲೇ ಈ ಶುದ್ಧ ಕುಡಿಯುವ ನೀರಿನ ಘಟಕವಿದ್ದು ರಸ್ತೆ ಅಗಲೀಕರಣ ಸಂದರ್ಭ ಅಡಚಣೆಯಾಗಿ ತೆರವುಗೊಳಿಸುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಅರಿವಿದ್ದರೂ ಕೂಡ ನಿರ್ಮಾಣವಾಗಿರುವ ನೀರಿನ ಘಟಕ ಪ್ರಸ್ತುತ ನಿಷ್ಪ್ರಯೋಜಕವಾಗಿದೆ. ಇದರಿಂದದಾಗಿ ಈ ಘಟಕದ ನೀರು ಬಳಸಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


