ಮೈಸೂರು: ಪೇಜಾವರ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ವರ್ಷಾಂತ್ಯದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮನರಂಜನಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.ವರ್ಷಾಂತ್ಯ ಹಾಗೂ ಹೊಸ ವರ್ಷಾಚರಣೆ ಅಂಗವಾಗಿ ಆಯೋಜಿಸಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 12ಕ್ಕೆ ಯೋಜಿಸಿದ್ದ ಶಬ್ದರಹಿತ ಪಟಾಕಿ ಸಿಡಿಸುವ ಕಾರ್ಯಕ್ರಮ ಮುಂದೂಡಲಾಗಿದೆ. ಪಟಾಕಿ ಸಿಡಿಸುವ ಕಾರ್ಯಕ್ರಮವನ್ನು ಜನವರಿ 1ರ ರಾತ್ರಿ 9ಕ್ಕೆ ಮರುನಿಗದಿ ಮಾಡಲಾಗಿದೆ.ಪೊಲೀಸ್ ಬ್ಯಾಂಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜನವರಿ 1 ಮತ್ತು 2ಕ್ಕೆ ಮುಂದೂಡಲಾಗಿದೆ. ಅಲ್ಲದೆ ಶೋಕಾಚರಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರವು ಇರುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.ಮಹಾಸಂತ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಭಾನುವಾರ ಕೃಷ್ಣನಲ್ಲಿ ಲೀನರಾಗಿದ್ದಾರೆ. ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರಶ್ರೀಗಳ ಅಂತಿಮ ವಿಧಿವಿಧಾನಗಳು ಮಾಧ್ವ ಪರಂಪರೆಗೆ ಅನುಗುಣವಾಗಿ ಮಾಡಲಾಗಿದೆ.Sign in to your account
Username or Email Address


Password

 Remember Me


