ಉಡುಪಿ: ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಸದ್ಯ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೂಜಾ ಸಾಮಾಗ್ರಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರವನ್ನು ಸಿಬ್ಬಂದಿ ವಾಹನದೊಳಗೆ ತುಂಬಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ವಿದ್ಯಾಪೀಠಕ್ಕೆ ಈ ಸಾಮಾಗ್ರಿಗಳು ಶಿಫ್ಟ್ ಆಗಲಿವೆ. ಕಿರಿಯ ಸ್ವಾಮೀಜಿಗಳು ಕೂಡ ಸಂಜೆ ವಿದ್ಯಾ ಪೀಠಕ್ಕೆ ತೆರಳಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.ಈಗಾಗಲೇ ಶ್ರೀಗಳ ಸುಮಾರು 30 ಮಂದಿ ಶಿಷ್ಯರು ಶಿಫ್ಟ್ ಆಗಿದ್ದಾರೆ. 6 ಟಿಟಿಯಲ್ಲಿ ಪೂಜಾ ಸಾಮಾಗ್ರಿ ಹಾಗೂ ಶಿಷ್ಯವೃಂದದವರು ತೆರಳಿದ್ದಾರೆ. ಕಿರಿಯ ಶ್ರೀಗಳ ಪೂಜಾ ಸಾಮಾಗ್ರಿಗಳನ್ನು ಕೂಡ ಶಿಫ್ಟ್ ಮಾಡಲಾಗಿದೆ. ಸಂಜೆಯ ವೇಳೆಯ ಪೂಜೆ ವಿದ್ಯಾಪೀಠದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಪೂಜಾ ಸಾಮಾಗ್ರಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.Udupi: Pejavara Mutt Seer Vishwesha Teertha Swami's treatment will continue in Udupi Sri Krishna Mutt. All arrangements of ventilator and ICU units kept ready in Mutt. #Karnataka https://t.co/MFjGAyWzAz— ANI (@ANI) December 29, 2019Sign in to your account
Username or Email Address


Password

 Remember Me


