ಯಾದಗಿರಿ: ಚಲಿಸುತ್ತಿರುವ ಆಟೋದಲ್ಲಿಯೇ ಹೆರಿಗೆಯಾಗಿರುವ ಘಟನೆ ಯಾದಗಿರಿ ನಗರದ ಮಧ್ಯ ಭಾಗದಲ್ಲಿ ತಡರಾತ್ರಿ ನಡೆದಿದೆ.ದೇವಿ ಎಂಬಾಕೆ ಮಾರ್ಗ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದೇವಿ ಯಾದಗಿರಿ ತಾಲೂಕಿನ ಮುದ್ನಾಳ ತಾಂಡದ ನಿವಾಸಿಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ದಾಖಲೆಗಳು ಸರಿಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಹೆರಿಗೆ ನೋವು ಅನುಭವಿಸುತ್ತಿದ್ದ ದೇವಿಯನ್ನು ತಡರಾತ್ರಿ ವೈದ್ಯರು ವಾಪಸ್ ಕಳುಹಿಸಿದ್ದಾರೆ.ವಾಪಸ್ ಹೋಗುವಾಗ ಆಟೋದಲ್ಲೇ ಹೆರಿಯಾಗಿದೆ. ಸದ್ಯಕ್ಕೆ ದೇವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ. ಮುದ್ನಾಳ ಯಾದಗಿರಿಯ ಬಿಜೆಪಿ ಶಾಸಕ ವೆಂಕಟರೆಡ್ಡಿ ಸ್ವಗ್ರಾಮವಾಗಿದ್ದು, ಸ್ವತಃ ಶಾಸಕರ ಗ್ರಾಮದ ಸರ್ಕಾರಿ ಆಸ್ಪತ್ರೆಯ ವೈದ್ಯರು ಈ ರೀತಿ ಅಮಾನವೀಯತೆ ಪ್ರದರ್ಶನ ಮಾಡಿದ್ದು, ದೇವಿ ಅವರ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.Sign in to your account
Username or Email Address


Password

 Remember Me


