ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಬೆಂಬಲಿತ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗೆಗ್ಗಿಲರಾಳ್ಳಹಳ್ಳಿಯಲ್ಲಿ ನಡೆದಿದೆ.ಸೋಮೇನಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷೆ ರಜನಿ ಮಂಜುನಾಥರೆಡ್ಡಿ ಹಾಗೂ ತಾಲೂಕು ಪಂಚಾಯತಿ ಅಧ್ಯಕ್ಷೆ ವರಲಕ್ಷ್ಮೀ ಕೃಷ್ಣೇಗೌಡರ ಬಣಗಳ ನಡುವೆ ಮಾರಾಮಾರಿ ನಡೆದಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಇಂದು ಗೆಗ್ಗಿಲರಾಳ್ಳಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ವಾಪಾಸಾಗುತ್ತಿದ್ದರು.ಸೋಮೇನಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷೆ ರಜನಿ ಹಾಗೂ ಆಕೆಯ ಪತಿ ಮಂಜುನಾಥ್ ಶಾಸಕರನ್ನು ಅಡ್ಡ ಹಾಕಿ, ಸರ್ ಮಂಗಳವಾರ ಗುಡಿಬಂಡೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸೋಮೇನಹಳ್ಳಿ ಗ್ರಾಮಪಂಚಾಯತಿಯ ಗೆಗ್ಗಿಲರಾಳ್ಳಹಳ್ಳಿ ಗ್ರಾಮದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ಹೇಳಿಕೆ ನೀಡಿದ್ದೀರಿ? ನೀವು ಶಾಸಕರಾಗಿದ್ದಾಗಲೇ ತಾನೇ ಆ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಅದು ಹೇಗೆ ಅವ್ಯವಹಾರ ಆಗಲು ಸಾಧ್ಯ ಎಂದು ಪ್ರಶ್ನೆ ಮಾಡಿದ್ದರಂತೆ.ಇದೇ ವೇಳೆ ತಾಲೂಕು ಪಂಚಾಯತಿ ಅಧ್ಯಕ್ಷೆ ವರಲಕ್ಷ್ಮೀ ಪತಿ ಕೃಷ್ಣೇಗೌಡ ಕೂಡ ನಮಗೆ ಈ ಹಿಂದೆ ತಾಲೂಕು ಪಂಚಾಯತಿ ಅನುದಾನದಲ್ಲಿ ಮಾಡಿದ ಕಾಮಗಾರಿಗಳ ಹಣ ಬಿಡುಗಡೆ ಮಾಡಿಸಲಿಲ್ಲ ಎಂದು ಕೃಷ್ಣೇಗೌಡರ ವಿರುದ್ಧ ಶಾಸಕರಿಗೆ ದೂರು ನೀಡಿದ್ದರಂತೆ. ಇದರಿಂದ ಕೆರೆಳಿದ ಕೃಷ್ಣೇಗೌಡ ಬಣದವರು ಏನು ಶಾಸಕರನ್ನೇ ಅಡ್ಡ ಹಾಕಿ ಪ್ರಶ್ನೆ ಮಾಡ್ತೀರಿ ಎಂದು ವಾಗ್ವಾದ ನಡೆಸಿದ್ದಾರೆ.ಗೆಗ್ಗಿಲರಾಳ್ಳಹಳ್ಳಿ ಗ್ರಾಮದವರೇ ಆದ ಶಾಸಕರ ಬೆಂಬಲಿತ ಒಂದೇ ಗ್ರಾಮದವರ ಎರಡು ಬಣಗಳ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬ ರಜನಿಯವರಿಗೆ ಚಪ್ಪಲಿ ತೋರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೆರಳಿದ ರಜನಿ ಕಡೆಯವರು ಹಾಗೂ ವಿರೋಧಿ ಗುಂಪಿನವರು ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ. ಸ್ಥಳದಲ್ಲೇ ಇದ್ದ ಶಾಸಕ ಸುಬ್ಬಾರೆಡ್ಡಿ ಹಾಗೂ ಇತರೆ ಜನಪ್ರತಿನಿಧಿಗಳು ಹಾಗೂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.Sign in to your account
Username or Email Address


Password

 Remember Me


