ಕೊಪ್ಪಳ: ವಾಲ್ಮೀಕಿ ಸಮುದಾಯದ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ, ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.ಗಂಗಾವತಿಯಲ್ಲಿ ಆದಿಕಾವಿ ವಾಲ್ಮೀಕಿ ಜಾತ್ರೆಯ ಅಂಗವಾಗಿ ನಾಯಕ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, 2008ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಾಲ್ಮೀಕಿ ಸಮುದಾಯದ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಿತ್ತು. ಅದರಂತೆ ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುತ್ತೇವೆ ಎಂದು ಘೊಷಣೆ ಕೂಡ ಮಾಡಿದ್ದರು. ಬಿಜೆಪಿ ನಾಯಕರ ಭರವಸೆಯಂತೆ ನಮ್ಮ ಸಮುದಾಯದ ಒಬ್ಬರನ್ನು ಡಿಸಿಎಂ ಮಾಡಬೇಕು ಮತ್ತು ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.ಈಗಾಗಲೆ ಸಮಾಜದ ಬಹುದೊಡ್ಡ ಬೇಡಿಕೆ ಎಂಬಂತೆ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡಬೇಕೆಂದು ಸಮಾಜದ ಬೇಡಿಕೆಯಾಗಿದೆ. ಬರುವ ವಾಲ್ಮೀಕಿ ಜಾತ್ರೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.Sign in to your account
Username or Email Address


Password

 Remember Me


