ನೆಲಮಂಗಲ: ಬೆಂಗಳೂರಿನ ಕೊಳಚೆ ನೀರು ಗ್ರಾಮೀಣ ಭಾಗದ ಕೆರೆಗಳಿಗೆ ಹರಿದು ಬರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ತಿಳಿಸಿದ್ದಾರೆ.ದಾಸನಪುರ ಹೋಬಳಿಯ ಕಾಚೋಹಳ್ಳಿ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲುಷಿತ ನೀರು ಸೇರದಂತೆ ಮೂರು ಕೆರೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿದ್ದಾರೆ. ನಗರದಿಂದ ಯಥೇಚ್ಛವಾಗಿ ಕೊಳಚೆ ನೀರು ಹರಿದು ಬರುತ್ತಿರುವ ಪರಿಣಾಮ ಯಲಹಂಕ ಕ್ಷೇತ್ರ ವ್ಯಾಪ್ತಿಯ ಕಾಚೋಹಳ್ಳಿ, ಮಾಚೋಹಳ್ಳಿ ಹಾಗೂ ಗಂಗೊಂಡನಹಳ್ಳಿ ಕೆರೆಗಳು ಮಲಿನಗೊಂಡಿದ್ದು ಪುನರುಜ್ಜೀವನಗೊಳಿಸಲು ಪ್ರತಿ ಕೆರೆಯ ಅಭಿವೃದ್ಧಿಗೆ ತಲಾ ಎರಡು ಕಾಲು ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.ಜಲಮೂಲಗಳ ರಕ್ಷಣೆಗೆ ಬಿಜೆಪಿ ಸರ್ಕಾರ ವಿಶೇಷ ಒತ್ತು ನೀಡಿದ್ದು, ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಶುದ್ಧೀಕರಿಸಿದ ನೀರನ್ನು ಮಾತ್ರ ಹರಿಸುವ ಬೃಹತ್ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.ಇದೇ ವೇಳೆ ದಾಸನಪುರ ಹೋಬಳಿ ಸೇರಿದಂತೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಗ್ರಾಮಸ್ಥರ ಜೀವನಮಟ್ಟ ಸುಧಾರಣೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಕಾಚೋಹಳ್ಳಿ ಹಾಗೂ ಕಿತ್ತನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಶುದ್ಧ ನೀರಿನ ಘಟಕ, ಅಂಗನವಾಡಿ ನಿರ್ಮಾಣ ಸೇರಿದಂತೆ ಇಪ್ಪತ್ತೈದು ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.Sign in to your account
Username or Email Address


Password

 Remember Me


