ಚಿಕ್ಕಬಳ್ಳಾಪುರ: ಮೋಡ ಮುಸುಕಿದ ವಾತಾವಾರಣದ ನಡುವೆಯೂ ಕೇತುಗ್ರಸ್ಥ ಕಂಕಣ ಸೂರ್ಯ ಗ್ರಹಣ ಚಿಕ್ಕಬಳ್ಳಾಪುರದಲ್ಲಿ ಗೋಚರವಾಗಿದೆ.ಗ್ರಹಣ ಸ್ಪರ್ಶಕಾಲದಲ್ಲಿ ಮೋಡ ಮುಸುಕಿದ ವಾತಾವರಣವಿದ್ದ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಗ್ರಹಣ ದರ್ಶನ ಭಾಗ್ಯ ಸಿಗಲಿಲ್ಲ. ಆದರೆ ಗ್ರಹಣ ಮಧ್ಯ ಕಾಲ ಆಗಮಿಸುತ್ತಿದ್ದಂತೆ ಮೋಡಗಳು ಮರೆಯಾದ ಕಾರಣ ಜನರಿಗೆ ಸೂರ್ಯ ಗ್ರಹಣ ದರ್ಶನ ಭಾಗ್ಯ ಸಿಕ್ಕಿತು.ಆಗೊಮ್ಮೆ ಹೀಗೊಮ್ಮೆ ಎಂದು ಮೋಡಗಳು ಮರೆಯಾಗುತ್ತಿದ್ದಂತೆ ಜನರಿಗೆ ಸೂರ್ಯ ಗ್ರಹಣ ಭಾಗ್ಯ ಕಣ್ತುಂಬಿಕೊಳ್ಳುವ ಅವಕಾಶ ಸಿಗುತ್ತಿತ್ತು. ಮೋಡಗಳ ಆಟ ನೋಡುಗರಿಗೆ ಇರುಸು ಮುರುಸಾದರೂ ಆಗಾಗ ಮೋಡಗಳ ಮರೆಯಲ್ಲಿ ನಾನು ಇರುವೆ ಎಂದು ಬಂದು ಹೋಗುತ್ತಿದ್ದ ಸೂರ್ಯಗ್ರಹಣದ ಭಾಗ್ಯ ನೋಡುಗರ ಮನ ಸಂತಸಗೊಳಿಸಿತ್ತು.ಹಲವು ವರ್ಷಗಳ ನಂತರ ಸೂರ್ಯಗ್ರಹಣ ಕಂಡ ಜಿಲ್ಲೆಯ ಜನರಗೆ ಕೊನೆಗೂ ಮೋಡಗಳ ಮರೆಯಿಂದ ಸೂರ್ಯ ಗ್ರಹಣದ ದರ್ಶನ ಭಾಗ್ಯವಂತೂ ದಕ್ಕಿದೆ.Sign in to your account
Username or Email Address


Password

 Remember Me


