ಕೊಲೆ ಕೇಸ್‌ನಲ್ಲಿ (Renukaswamy Murder Case) ಅರೆಸ್ಟ್ ಆಗಿರುವ ದರ್ಶನ್ (Darshan) ನೋಡಲು ತಾಯಿ ಮೀನಾ ತೂಗುದೀಪ (Meena Thoogudeepa) ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಮಗಳ ಜೊತೆ ಮೀನಾ ಜೈಲಿಗೆ ಆಗಮಿಸಿದ್ದಾರೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ಗೆದ್ದ ಕೋಡಳ್ಳಿ ಶಿವರಾಮ್ ವಿಧಿವಶಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ದರ್ಶನ್ ನೋಡಲು ಮೀನಾ ಬಂದಿರಲಿಲ್ಲ. ಇದೀಗ ದರ್ಶನ್ ತಾಯಿ, ಸಹೋದರಿ ದಿವ್ಯಾ, ಬಾವ ಮಂಜುನಾಥ ಹಾಗೂ ಅಕ್ಕನ ಮಕ್ಕಳು ಆಗಮಿಸಿ ದರ್ಶನ್ ಕುಶಲೋಪರಿ ವಿಚಾರಿಸಿದ್ದಾರೆ. ಮಗನನ್ನು ಕಂಡೊಡನೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ತಾಯಿ ಮೀನಾ ಹಾಗೂ ಸಹೋದರಿ.ಇನ್ನೂ ಸೆ.17ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ಗೌಡ ಜೈಲಿಗೆ ಭೇಟಿ ನೀಡಿದ್ದರು. ಮನೆಯ ತಿನಸುಗಳು ಮತ್ತು ಹಣ್ಣುಗಳನ್ನು ನೀಡಿ ಕಾನೂನು ಸಮರ ಬಗ್ಗೆ ಚರ್ಚಿಸಿ ಹೋಗಿದ್ದರು.Sign in to your account
Username or Email Address


Password

 Remember Me


